ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಪಾಲ್ಗೊಂಡರು. ತರಗತಿಯ ಮೊದಲ ದಿನವೇ 25ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು. ಸುಪ್ರಭಾ ಅವರು ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್ ಅವರು ತರಗತಿ ನಡೆಸಿಕೊಟ್ಟರು. ಮುಳಿಯ ಜ್ಯುವೆಲ್ಸ್ನ ಎಲ್ಲ ಅಧಿಕಾರಿ- ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಐಯ್ತಪ್ಪ ನಾಯ್ಕ , ರಾಮದಾಸ್ ಗೌಡ ಉಪಸ್ಥಿತರಿದ್ದರು.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…