ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಮುಳಿಯ ಜ್ಯುವೆಲ್ಸ್ ಶ್ರೀ ಮಹಾಲಿಂಗೇಶ್ವರ ದೇವರ ಖಾಸಗಿ ಕಟ್ಟೆಯಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳನ್ನು ಶನಿವಾರ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ದೀಪೋಜ್ವಲನದ ಮೂಲಕ ಉದ್ಘಾಟಿಸಲಾಯಿತು.
ಮುಖ್ಯ ಅತಿಥಿಯಾಗಿ ಪುತ್ತೂರು ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಪಾಲ್ಗೊಂಡರು. ತರಗತಿಯ ಮೊದಲ ದಿನವೇ 25ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು. ಸುಪ್ರಭಾ ಅವರು ಕಾರ್ಯಕ್ರಮ ನಿರೂಪಿಸಿದರು. ಸತ್ಯನಾರಾಯಣ ಭಟ್ ಅವರು ತರಗತಿ ನಡೆಸಿಕೊಟ್ಟರು. ಮುಳಿಯ ಜ್ಯುವೆಲ್ಸ್ನ ಎಲ್ಲ ಅಧಿಕಾರಿ- ಸಿಬ್ಬಂದಿ ವರ್ಗ ಕಾರ್ಯಕ್ರಮಕ್ಕೆ ಸಹಕರಿಸಿದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ್ ಮುಳಿಯ ಅವರು ಗೌರವ ಉಪಸ್ಥಿತರಿದ್ದರು. ಸದಸ್ಯರಾದ ರಾಮಚಂದ್ರ ಕಾಮತ್ , ಐಯ್ತಪ್ಪ ನಾಯ್ಕ , ರಾಮದಾಸ್ ಗೌಡ ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…