ಪುತ್ತೂರಿನ ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.
ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ, ಕೇಶವ ಪ್ರಸಾದ್ ನೀಲಗಿರಿ, ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೂಪ್, ಮುಖ್ಯಗುರುಗಳಾದ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…