ಪುತ್ತೂರಿನ ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.
ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ, ಕೇಶವ ಪ್ರಸಾದ್ ನೀಲಗಿರಿ, ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೂಪ್, ಮುಖ್ಯಗುರುಗಳಾದ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…