Advertisement
ಸುದ್ದಿಗಳು

ಪಟ್ಟೆಯಲ್ಲಿ ಶ್ರೀಕೃಷ್ಣಲೀಲೆ – 2025 | ಅಭಿನಂದನಾ ಕಾರ್ಯಕ್ರಮ

Share

ಪುತ್ತೂರಿನ ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.

ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.

ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ  ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ,  ಕೇಶವ ಪ್ರಸಾದ್ ನೀಲಗಿರಿ,  ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ  ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ  ಅನೂಪ್, ಮುಖ್ಯಗುರುಗಳಾದ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

14 minutes ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

12 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

13 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

20 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago