ಪುತ್ತೂರಿನ ದ್ವಾರಕಾ ಪ್ರತಿಷ್ಠಾನ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣಲೀಲೆ 2025 ರ ಅಭಿನಂನಂದನಾ ಕಾರ್ಯಕ್ರಮ ಶಾಲಾ ಆವರಣದಲ್ಲಿ ನಡೆಯಿತು.
ವಿಜೃಂಭಣೆಯಿಂದ ನಡೆದ ಶ್ರೀಕೃಷ್ಣ ಲೀಲೆ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಈ ಸಭೆಯಲ್ಲಿ ಕೃತಜ್ಞತೆಯನ್ನು ಸಲ್ಲಿಸಲಾಯಿತು. ಎಸ್ ಕೆ ಫ್ರೆಂಡ್ಸ್ ಮುಡಿಪಿನಡ್ಕ, ಶ್ರೀಕೃಷ್ಣ ಯುವಕಮಂಡಲ ಪಟ್ಟೆ, ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ ಪಟ್ಟೆ, ಶ್ರೀಕೃಷ್ಣ ಭಜನಾ ಮಂಡಳಿ ಮುಡಿಪಿನಡ್ಕ, ಅಯ್ಯಪ್ಪ ಭಜನಾ ಮಂಡಳಿ ಪೆರಿಗೇರಿ ಹಾಗೂ ನವಚೈತನ್ಯ ಯುವಕಮಂಡಲ ಪೆರಿಗೇರಿ ಇದರ ಪದಾದಿಕಾರಿಗಳು ಹಾಗೂ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ಶಾಲೆಯ ಮೇಲೆ ಅಭಿಮಾನವಿಟ್ಟು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟ ಎಲ್ಲಾ ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳು ಮತ್ತು ಸಮಾಜ ಬಾಂಧವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಲಾಯಿತು.
ಸಂಸ್ಥೆಯ ಸಂಚಾಲಕರಾದ ವಿಘ್ನೇಶ್ ಹಿರಣ್ಯ ಇವರು ಸ್ವಾಗತಿಸಿ, ಮುಖ್ಯಗುರುಗಳಾದ ಸುಮನಾ ಬಿ ವಂದಿಸಿದರು. ಪೋಷಕ ವಿದ್ಯಾ ಸಂಸ್ಥೆಗಳ ಪೋಷಕ ಮಂಡಳಿಯ ಅಧ್ಯಕ್ಷರುಗಳಾದ ಲಿಂಗಪ್ಪ ಗೌಡ ಮೂಡಿಕೆ, ಕೇಶವ ಪ್ರಸಾದ್ ನೀಲಗಿರಿ, ಸತೀಶ್ ಕೊಪ್ಪಳ, ನಿವೃತ್ತ ಯೋಧರಾದ ಸುಬ್ಬಪ್ಪ ಪಾಟಾಳಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅನೂಪ್, ಮುಖ್ಯಗುರುಗಳಾದ ರಾಜಗೋಪಾಲ ಎನ್, ಶಾಲಾ ಶಿಕ್ಷಕವೃಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…