Advertisement
Election MIRROR

ಚುನಾವಣಾ ಕಣ | ಪುತ್ತೂರಿನಲ್ಲಿ ಮತ್ತೆ ತ್ರಿಕೋನ ಸ್ಫರ್ಧೆ | ಟ್ರೆಂಡ್‌ ಆಗುತ್ತಿದೆ ಪುತ್ತೂರಿಗೆ ಪುತ್ತಿಲ | ಬ್ಯಾಟ್‌ ಹಿಡಿದ ಪಕ್ಷೇತರ ಅಭ್ಯರ್ಥಿ..! |

Share

ಪುತ್ತೂರು ವಿಧಾನ ಸಭಾ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಹೈವೋಲ್ಟೇಜ್‌ ಕ್ಷೇತ್ರವಾಗಿದೆ.ನಾಮಪತ್ರ ಹಿಂತೆಗೆಯುವ ಸಮಯ ಕಳೆದಿದೆ. ಈಗ ತ್ರಿಕೋನ ಸ್ಪರ್ಧೆಯಲ್ಲಿರುವ ಕ್ಷೇತ್ರದಲ್ಲಿ ಗೆಲುವಿನ ಬಗ್ಗೆ ಚರ್ಚೆಯಾಗುತ್ತಿದೆ. ಪುತ್ತೂರಿಗೆ ಪುತ್ತಿಲ ಮತ್ತೊಮ್ಮೆ ಟ್ರೆಂಡ್‌ ಆಗಿದೆ. ಬ್ಯಾಟ್‌ ಚಿಹ್ನೆಯ ಮೂಲಕ ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಪುತ್ತೂರಿಗೆ ಪುತ್ತಿಲ ಎಂದು  ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸದ್ದು ಮಾಡುತ್ತಿದ್ದಾರೆ.

Advertisement
Advertisement

ಅರುಣ್‌ ಕುಮಾರ್‌ ಪುತ್ತಿಲ ಅವರು ಹಿಂದುತ್ವದ ಆಧಾರದಲ್ಲಿಯೇ ಕಣದಲ್ಲಿದ್ದಾರೆ. ಯಾರ ವಿರುದ್ಧ ಸ್ಫರ್ಧೆ ಎನ್ನುವುದಕ್ಕಿಂತಲೂ ಹಿಂದುತ್ವದ ಪರವಾದ ಸ್ಫರ್ಧೆ ಇದು, ನಾಮಪತ್ರ ಹಿಂತೆಗೆದು ಮತ್ತೆ ಕಾರ್ಯಕರ್ತರ ಭಾವನೆಗೆ ನಾನೂ ನೋವು ನೀಡಲಾರೆ ಎಂದು ಸ್ಪಷ್ಟಪಡಿಸಿದ್ದರು.  ಎಂದು ಅರುಣ್‌ ಕುಮಾರ್‌ ಪುತ್ತಿಲ ಸ್ಫಷ್ಟಪಡಿಸಿದ್ದಾರೆ. ಈ ನಡುವೆಯೇ ಕಣದಲ್ಲಿ ಸಾಕಷ್ಟು ಪ್ರಚಾರ ನಡೆಯುತ್ತಿದೆ. ಪ್ರಚಾರದಲ್ಲಿ ಪುತ್ತಿಲ ಅವರ ಅಭಿಮಾನಿಗಳು, ಹಿಂದೂ ಕಾರ್ಯಕರ್ತರು ಮುಂದಿದ್ದಾರೆ. ಪುತ್ತಿಲ ಬೆಂಬಲಿತರು  ಪುತ್ತಿಲ ಪರ ಪ್ರಚಾರಕ್ಕೆ ಮುಂದಾಗಿದ್ದಾರೆ.  ಹಲವು ಯುವಕರ ಮೊಬೈಲ್ ಹಿಂದೆ, ವಾಹನಗಳಲ್ಲಿ, ಎಲ್ಲೆಂದರಲ್ಲಿ  ಅರುಣ್ ಪುತ್ತಿಲ ಸ್ಟಿಕ್ಕರ್ ಶುರುವಾಗಿದೆ. ಹಿಂದುತ್ವದ ಗೆಲವು ಆಗಲೇಬೇಕು ಎಂಬ ಸದ್ದಿಲ್ಲದ ಅಭಿಯಾನ ಆರಂಭವಾಗಿದೆ. ಅನೇಕ ಫೋಟೊಗಳು, ಅಭಿಯಾನಗಳು ಸೋಶಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗುತ್ತಿದೆ.

ಈ ಎಲ್ಲದರ ನಡುವೆಯೇ ಪ್ರಚಾರ, ಅಪಪ್ರಚಾರಗಳೂ ಕಣದಲ್ಲಿ ಜೋರಾಗಿದೆ ಅಭಿವೃದ್ಧಿ ಬಗ್ಗೆ ಚರ್ಚೆ ಕಡಿಮೆಯಾಗಿದೆ. ಅರುಣ್‌ ಕುಮಾರ್‌ ಪುತ್ತಿಲ ಅವರು ಹಲವಾರು ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಯೋಜನೆ ಹಾಕಿಕೊಂಡು, ಮುಂದೆ ಈ ಅಪಪ್ರಚಾರಗಳನ್ನು ನಿರ್ಲಕ್ಷಿಸಿ ಹಿಂದುತ್ವದ ಗೆಲುವಿಗೆ ಪಣ ತೊಡುತ್ತೇವೆ ಎಂದು ಹೇಳಿದ್ದಾರೆ.  ಈಗಾಗಲೇ ಅಡಿಕೆ ಬೆಳೆಗಾರರ ಹಿತದೃಷ್ಟಿಯಿಂದ ಅಡಿಕೆ ಕೃಷಿಕರ, ಸಾಮಾಜಿಕ ಕಾಳಜಿ ಇರುವ ಕೃಷಿಕರಿಗೂ ದೂರವಾಣಿ ಮೂಲಕ ಮಾತುಕತೆ ನಡೆಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಕೃಷಿಕರು ಬರೆದುಕೊಂಡಿದ್ದಾರೆ.

ಬಿಜೆಪಿಯಿಂದ ಆಶಾ ತಿಮ್ಮಪ್ಪ, ಕಾಂಗ್ರೆಸ್‌ನಿಂದ ಅಶೋಕ್ ಕುಮಾರ್ ರೈ ಸ್ಪರ್ಧೆ ಮಾಡುತ್ತಿದ್ದಾರೆ. ‌ ಈವರ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಈ ನಡುವೆಯೇ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಪುತ್ತೂರಿನಲ್ಲಿ ಇತಿಹಾಸ ಸೃಷ್ಟಿಸಲು ಪಣ ತೊಟ್ಟಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

10 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

11 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

11 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

11 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

11 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

11 hours ago