ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.
ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.
ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.
ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…
ರೈತರು ಸ್ಥಾಪಿಸಿರುವ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಕಲ ಸಹಕಾರ…