ಪುತ್ತೂರಿನಲ್ಲಿ ಅರುಣ್ ಕುಮಾರ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಅವರ ಅಭಿಮಾನಿಗಳ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ.
ಕಾರ್ಯಕರ್ತರ ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ.
ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರು ಎ.17 ಸೋಮವಾರದಂದು ನಾಮಪತ್ರ ಸಲ್ಲಿಸಲಿದ್ದಾರೆ.
ಎ.17 ರಂದು ಬೆಳಿಗ್ಗೆ ಪುತ್ತೂರು ಮಹಾತೋಭಾರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ಬೆಳಿಗ್ಗೆ 10ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಪುತ್ತೂರು ತಾಲೂಕು ಆಡಳಿತ ಸೌಧದವರೆಗೆ ಮೆರವಣಿಗೆಯೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…