ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಐ.ಬಿ.ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕದ ಕುಮಾರ್ ಕಲ್ಲಾರೆ, ಕಾರ್ಯದರ್ಶಿಯಾಗಿ ನ್ಯೂಸ್ 18 ಕನ್ನಡ ವರದಿಗಾರ ಅಜಿತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಹೊಸದಿಗಂತ ಪತ್ರಿಕೆಯ ರಾಜೇಶ್ ಪಟ್ಟೆ, ಖಜಾಂಚಿಯಾಗಿ ದೈಜಿ ವರ್ಲ್ಡ್ ಚಾನಲ್ ವರದಿಗಾರ ಕೃಷ್ಣಪ್ರಸಾದ್ ಬಲ್ನಾಡು ಅವರನ್ನು ಆಯ್ಕೆ ಮಾಡಲಾಯಿತು.
ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸದಸ್ಯರ ಸಭೆಯಲ್ಲಿ ಒತ್ತಾಯ ನಡೆಯಿತು. ಈ ಹಿನ್ನಲೆಯಲ್ಲಿ ಪುತ್ತೂರು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿಗಳಾದ ನರಸಿಂಹ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ಪತ್ರಿಕಾ ಕಛೇರಿಯ ಮೆನೇಜರ್ ಆಗಿ ವಿ ಫೋರ್ ವರದಿಗಾರ ಪ್ರವೀಣ್ ಕುಮಾರ್ ಬೊಳುವಾರು ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು.
ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತಾಲೂಕಿನ ಪತ್ರಕರ್ತರ ಹಿತರಕ್ಷಣೆಗೆ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಬಿಡಿಸುದ್ದಿ ವರದಿಗಾರರು, ಡಿಜಿಟಲ್ ಮೀಡಿಯಾದ ವರದಿಗಾರರನ್ನು, ಸಂಪಾದಕರನ್ನು ಕೂಡಾ ಸಂಘಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ನೂತನ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…