ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಐ.ಬಿ.ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕದ ಕುಮಾರ್ ಕಲ್ಲಾರೆ, ಕಾರ್ಯದರ್ಶಿಯಾಗಿ ನ್ಯೂಸ್ 18 ಕನ್ನಡ ವರದಿಗಾರ ಅಜಿತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಹೊಸದಿಗಂತ ಪತ್ರಿಕೆಯ ರಾಜೇಶ್ ಪಟ್ಟೆ, ಖಜಾಂಚಿಯಾಗಿ ದೈಜಿ ವರ್ಲ್ಡ್ ಚಾನಲ್ ವರದಿಗಾರ ಕೃಷ್ಣಪ್ರಸಾದ್ ಬಲ್ನಾಡು ಅವರನ್ನು ಆಯ್ಕೆ ಮಾಡಲಾಯಿತು.
ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸದಸ್ಯರ ಸಭೆಯಲ್ಲಿ ಒತ್ತಾಯ ನಡೆಯಿತು. ಈ ಹಿನ್ನಲೆಯಲ್ಲಿ ಪುತ್ತೂರು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿಗಳಾದ ನರಸಿಂಹ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ಪತ್ರಿಕಾ ಕಛೇರಿಯ ಮೆನೇಜರ್ ಆಗಿ ವಿ ಫೋರ್ ವರದಿಗಾರ ಪ್ರವೀಣ್ ಕುಮಾರ್ ಬೊಳುವಾರು ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು.
ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತಾಲೂಕಿನ ಪತ್ರಕರ್ತರ ಹಿತರಕ್ಷಣೆಗೆ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಬಿಡಿಸುದ್ದಿ ವರದಿಗಾರರು, ಡಿಜಿಟಲ್ ಮೀಡಿಯಾದ ವರದಿಗಾರರನ್ನು, ಸಂಪಾದಕರನ್ನು ಕೂಡಾ ಸಂಘಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ನೂತನ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…