ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಸರ್ವ ಸದಸ್ಯರ ಸಭೆ ಪುತ್ತೂರು ಪತ್ರಿಕಾಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಅಧ್ಯಕ್ಷರಾಗಿ ಹೊಸದಿಗಂತ ಪತ್ರಿಕೆಯ ಐ.ಬಿ.ಸಂದೀಪ್ ಕುಮಾರ್, ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕದ ಕುಮಾರ್ ಕಲ್ಲಾರೆ, ಕಾರ್ಯದರ್ಶಿಯಾಗಿ ನ್ಯೂಸ್ 18 ಕನ್ನಡ ವರದಿಗಾರ ಅಜಿತ್ ಕುಮಾರ್, ಜತೆ ಕಾರ್ಯದರ್ಶಿಯಾಗಿ ಹೊಸದಿಗಂತ ಪತ್ರಿಕೆಯ ರಾಜೇಶ್ ಪಟ್ಟೆ, ಖಜಾಂಚಿಯಾಗಿ ದೈಜಿ ವರ್ಲ್ಡ್ ಚಾನಲ್ ವರದಿಗಾರ ಕೃಷ್ಣಪ್ರಸಾದ್ ಬಲ್ನಾಡು ಅವರನ್ನು ಆಯ್ಕೆ ಮಾಡಲಾಯಿತು.
ಹಲವು ಸಮಯಗಳಿಂದ ಅತಂತ್ರವಾಗಿದ್ದ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವಂತೆ ಸದಸ್ಯರ ಸಭೆಯಲ್ಲಿ ಒತ್ತಾಯ ನಡೆಯಿತು. ಈ ಹಿನ್ನಲೆಯಲ್ಲಿ ಪುತ್ತೂರು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿಗಳಾದ ನರಸಿಂಹ ಪ್ರಸಾದ್ ಅವರನ್ನು ಆಯ್ಕೆ ಮಾಡಲಾಯಿತು. ಪತ್ರಿಕಾ ಕಛೇರಿಯ ಮೆನೇಜರ್ ಆಗಿ ವಿ ಫೋರ್ ವರದಿಗಾರ ಪ್ರವೀಣ್ ಕುಮಾರ್ ಬೊಳುವಾರು ಅವರನ್ನು ಮುಂದುವರಿಸಲು ತೀರ್ಮಾನಿಸಲಾಯಿತು.
ಪುತ್ತೂರು ತಾಲೂಕು ಪತ್ರಕರ್ತರ ಸಂಘವು ತಾಲೂಕಿನ ಪತ್ರಕರ್ತರ ಹಿತರಕ್ಷಣೆಗೆ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಬಿಡಿಸುದ್ದಿ ವರದಿಗಾರರು, ಡಿಜಿಟಲ್ ಮೀಡಿಯಾದ ವರದಿಗಾರರನ್ನು, ಸಂಪಾದಕರನ್ನು ಕೂಡಾ ಸಂಘಕ್ಕೆ ಸೇರಿಸಿಕೊಳ್ಳುವ ಬಗ್ಗೆಯೂ ಚಿಂತನೆ ನಡೆಯುತ್ತಿದೆ ಎಂದು ನೂತನ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…