ಆ.26 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮ |

August 24, 2022
9:45 PM

ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ದೈವಜ್ಞರ ನಿರ್ದೇಶನದಂತೆ ಸೀಮೆಯ ಎಲ್ಲಾ ಭಕ್ತಾದಿಗಳು, ವ್ಯವಸ್ಥಾಪನಾ ಸಮಿತಿ, ಅಧಿಕಾರಿ ವರ್ಗ, ಚಾಕರಿಯವರು ಸೇರಿಕೊಂಡು ಈ ಪರಿಹಾರ ಸೇವೆಗಳು ನಡೆಯಲಿದೆ. ಪರಿಹಾರ ಕಾರ್ಯಕ್ರಮದಲ್ಲಿ 12 ತೆಂಗಿನಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ಪವಮಾನ ಅಭಿಷೇಕ ಸಹಿತ ಪರಿವಾರ ದೇವರುಗಳಿಗೆ, ದೈವಗಳಿಗೆ ವಿಶೇಷ ಪೂಜೆ ನಡೆಯಲಿದೆ.ಇದರ ಜೊತೆಗೆ ವಿವಿಧ ಸಮರ್ಪಣೆಗಳು ನಡೆಯಲಿದೆ. ದೇವರಿಗೆ ಒಂದು ಚಿನ್ನದ ತ್ರಿನೇತ್ರ ಸಮರ್ಪಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಭಕ್ತರು ಚಿನ್ನದ ತುಂಡು, ಬೆಳ್ಳಿಯ ತುಂಡು, 5 ರೂಪಾಯಿ ಒಳಗಿನ ಚಲಾವಣೆಯಲ್ಲಿರುವ ನಾಣ್ಯಗಳ ಸಹಿತ ಅಭಿಷೇಕ್ಕೆ ಯೋಗ್ಯವಾದ ಬೆಳ್ಳಿಯ ಕಲಶದಲ್ಲಿ ಹಾಕಲು ಅವಕಾಶವಿದೆ ಎಂದರು.

ಒಂದು ಕೋಲು ಎತ್ತರದ ಬೆಳ್ಳಿಯ ತುಪ್ಪ ದೀಪವನ್ನು ದೇವರಿಗೆ ಸಮರ್ಪಿಸಿ ಪ್ರಾರ್ಥಿಸಲಾಗುವುದು. ಹನ್ನೊಂದು ರುದ್ರ ರನ್ನು ಸಂಕಲ್ಪಿಸಿ ಸಕಲೋಪಚಾರಗಳಿಂದ ಪೂಜಿಸಿ, ವೈದಿಕರಿಗೆ ವಸ್ತ್ರ ಉತ್ತರೀಯ ಊಟೋಪಚಾರ ಕೊಟ್ಟು ಯಥಾ ಶಕ್ತಿ ದ್ರವ್ಯ ಗಂಟು ಕಟ್ಟಿ ಸಮರ್ಪಿಸಿ ಆಶೀರ್ವಾದ ಪೂರ್ವಕ ಮಂತ್ರಾಕ್ಷತೆ, ಪ್ರತಿವಚನ ಪಡೆಯುವ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸದಸ್ಯರಾದ ಶೇಖರ್ ನಾರಾವಿ, ಐತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ್ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಪ್ರಧಾನ ಅರ್ಚಕ ವಿ. ಯಸ್. ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror