Advertisement
ಧಾರ್ಮಿಕ

ಆ.26 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮ |

Share

ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

Advertisement

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ದೈವಜ್ಞರ ನಿರ್ದೇಶನದಂತೆ ಸೀಮೆಯ ಎಲ್ಲಾ ಭಕ್ತಾದಿಗಳು, ವ್ಯವಸ್ಥಾಪನಾ ಸಮಿತಿ, ಅಧಿಕಾರಿ ವರ್ಗ, ಚಾಕರಿಯವರು ಸೇರಿಕೊಂಡು ಈ ಪರಿಹಾರ ಸೇವೆಗಳು ನಡೆಯಲಿದೆ. ಪರಿಹಾರ ಕಾರ್ಯಕ್ರಮದಲ್ಲಿ 12 ತೆಂಗಿನಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ಪವಮಾನ ಅಭಿಷೇಕ ಸಹಿತ ಪರಿವಾರ ದೇವರುಗಳಿಗೆ, ದೈವಗಳಿಗೆ ವಿಶೇಷ ಪೂಜೆ ನಡೆಯಲಿದೆ.ಇದರ ಜೊತೆಗೆ ವಿವಿಧ ಸಮರ್ಪಣೆಗಳು ನಡೆಯಲಿದೆ. ದೇವರಿಗೆ ಒಂದು ಚಿನ್ನದ ತ್ರಿನೇತ್ರ ಸಮರ್ಪಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಭಕ್ತರು ಚಿನ್ನದ ತುಂಡು, ಬೆಳ್ಳಿಯ ತುಂಡು, 5 ರೂಪಾಯಿ ಒಳಗಿನ ಚಲಾವಣೆಯಲ್ಲಿರುವ ನಾಣ್ಯಗಳ ಸಹಿತ ಅಭಿಷೇಕ್ಕೆ ಯೋಗ್ಯವಾದ ಬೆಳ್ಳಿಯ ಕಲಶದಲ್ಲಿ ಹಾಕಲು ಅವಕಾಶವಿದೆ ಎಂದರು.

ಒಂದು ಕೋಲು ಎತ್ತರದ ಬೆಳ್ಳಿಯ ತುಪ್ಪ ದೀಪವನ್ನು ದೇವರಿಗೆ ಸಮರ್ಪಿಸಿ ಪ್ರಾರ್ಥಿಸಲಾಗುವುದು. ಹನ್ನೊಂದು ರುದ್ರ ರನ್ನು ಸಂಕಲ್ಪಿಸಿ ಸಕಲೋಪಚಾರಗಳಿಂದ ಪೂಜಿಸಿ, ವೈದಿಕರಿಗೆ ವಸ್ತ್ರ ಉತ್ತರೀಯ ಊಟೋಪಚಾರ ಕೊಟ್ಟು ಯಥಾ ಶಕ್ತಿ ದ್ರವ್ಯ ಗಂಟು ಕಟ್ಟಿ ಸಮರ್ಪಿಸಿ ಆಶೀರ್ವಾದ ಪೂರ್ವಕ ಮಂತ್ರಾಕ್ಷತೆ, ಪ್ರತಿವಚನ ಪಡೆಯುವ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸದಸ್ಯರಾದ ಶೇಖರ್ ನಾರಾವಿ, ಐತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ್ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಪ್ರಧಾನ ಅರ್ಚಕ ವಿ. ಯಸ್. ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

50 minutes ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

5 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

6 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago