Advertisement
ಧಾರ್ಮಿಕ

ಆ.26 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮ |

Share

ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ದೈವಜ್ಞರ ನಿರ್ದೇಶನದಂತೆ ಸೀಮೆಯ ಎಲ್ಲಾ ಭಕ್ತಾದಿಗಳು, ವ್ಯವಸ್ಥಾಪನಾ ಸಮಿತಿ, ಅಧಿಕಾರಿ ವರ್ಗ, ಚಾಕರಿಯವರು ಸೇರಿಕೊಂಡು ಈ ಪರಿಹಾರ ಸೇವೆಗಳು ನಡೆಯಲಿದೆ. ಪರಿಹಾರ ಕಾರ್ಯಕ್ರಮದಲ್ಲಿ 12 ತೆಂಗಿನಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ಪವಮಾನ ಅಭಿಷೇಕ ಸಹಿತ ಪರಿವಾರ ದೇವರುಗಳಿಗೆ, ದೈವಗಳಿಗೆ ವಿಶೇಷ ಪೂಜೆ ನಡೆಯಲಿದೆ.ಇದರ ಜೊತೆಗೆ ವಿವಿಧ ಸಮರ್ಪಣೆಗಳು ನಡೆಯಲಿದೆ. ದೇವರಿಗೆ ಒಂದು ಚಿನ್ನದ ತ್ರಿನೇತ್ರ ಸಮರ್ಪಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಭಕ್ತರು ಚಿನ್ನದ ತುಂಡು, ಬೆಳ್ಳಿಯ ತುಂಡು, 5 ರೂಪಾಯಿ ಒಳಗಿನ ಚಲಾವಣೆಯಲ್ಲಿರುವ ನಾಣ್ಯಗಳ ಸಹಿತ ಅಭಿಷೇಕ್ಕೆ ಯೋಗ್ಯವಾದ ಬೆಳ್ಳಿಯ ಕಲಶದಲ್ಲಿ ಹಾಕಲು ಅವಕಾಶವಿದೆ ಎಂದರು.

Advertisement

ಒಂದು ಕೋಲು ಎತ್ತರದ ಬೆಳ್ಳಿಯ ತುಪ್ಪ ದೀಪವನ್ನು ದೇವರಿಗೆ ಸಮರ್ಪಿಸಿ ಪ್ರಾರ್ಥಿಸಲಾಗುವುದು. ಹನ್ನೊಂದು ರುದ್ರ ರನ್ನು ಸಂಕಲ್ಪಿಸಿ ಸಕಲೋಪಚಾರಗಳಿಂದ ಪೂಜಿಸಿ, ವೈದಿಕರಿಗೆ ವಸ್ತ್ರ ಉತ್ತರೀಯ ಊಟೋಪಚಾರ ಕೊಟ್ಟು ಯಥಾ ಶಕ್ತಿ ದ್ರವ್ಯ ಗಂಟು ಕಟ್ಟಿ ಸಮರ್ಪಿಸಿ ಆಶೀರ್ವಾದ ಪೂರ್ವಕ ಮಂತ್ರಾಕ್ಷತೆ, ಪ್ರತಿವಚನ ಪಡೆಯುವ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸದಸ್ಯರಾದ ಶೇಖರ್ ನಾರಾವಿ, ಐತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ್ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಪ್ರಧಾನ ಅರ್ಚಕ ವಿ. ಯಸ್. ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

18 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

20 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago