Advertisement
ಧಾರ್ಮಿಕ

ಆ.26 ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮ |

Share

ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲ ತಿಂಗಳುಗಳ ಹಿಂದೆ ಅಷ್ಟಮಂಗಲ ಪ್ರಶ್ನಾಚಿಂತನೆ ನಡೆದಿತ್ತು. ಆಗ ದೈವಜ್ಞರು ಸೂಚಿಸಿದ ವಿವಿಧ ಪರಿಹಾರ ಕಾರ್ಯಕ್ರಮಗಳು ಆ.26ರ ಬೆಳಗ್ಗೆ ಗಂಟೆ 9 ರಿಂದ ದೇಗುಲದಲ್ಲಿ ನಡೆಯಲಿದೆ. ಬ್ರಹ್ಮಶ್ರೀ ವೇ ಮೂ ಕುಂಟಾರು ರವೀಶ ತಂತ್ರಿ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರಗಲಿರುವುದು ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ದೈವಜ್ಞರ ನಿರ್ದೇಶನದಂತೆ ಸೀಮೆಯ ಎಲ್ಲಾ ಭಕ್ತಾದಿಗಳು, ವ್ಯವಸ್ಥಾಪನಾ ಸಮಿತಿ, ಅಧಿಕಾರಿ ವರ್ಗ, ಚಾಕರಿಯವರು ಸೇರಿಕೊಂಡು ಈ ಪರಿಹಾರ ಸೇವೆಗಳು ನಡೆಯಲಿದೆ. ಪರಿಹಾರ ಕಾರ್ಯಕ್ರಮದಲ್ಲಿ 12 ತೆಂಗಿನಕಾಯಿ ಗಣಪತಿ ಹವನ, ಶತರುದ್ರಾಭಿಷೇಕ, ಪವಮಾನ ಅಭಿಷೇಕ ಸಹಿತ ಪರಿವಾರ ದೇವರುಗಳಿಗೆ, ದೈವಗಳಿಗೆ ವಿಶೇಷ ಪೂಜೆ ನಡೆಯಲಿದೆ.ಇದರ ಜೊತೆಗೆ ವಿವಿಧ ಸಮರ್ಪಣೆಗಳು ನಡೆಯಲಿದೆ. ದೇವರಿಗೆ ಒಂದು ಚಿನ್ನದ ತ್ರಿನೇತ್ರ ಸಮರ್ಪಣೆ ಮಾಡಲಾಗುವುದು. ಈ ಸಂದರ್ಭದಲ್ಲಿ ಭಕ್ತರು ಚಿನ್ನದ ತುಂಡು, ಬೆಳ್ಳಿಯ ತುಂಡು, 5 ರೂಪಾಯಿ ಒಳಗಿನ ಚಲಾವಣೆಯಲ್ಲಿರುವ ನಾಣ್ಯಗಳ ಸಹಿತ ಅಭಿಷೇಕ್ಕೆ ಯೋಗ್ಯವಾದ ಬೆಳ್ಳಿಯ ಕಲಶದಲ್ಲಿ ಹಾಕಲು ಅವಕಾಶವಿದೆ ಎಂದರು.

ಒಂದು ಕೋಲು ಎತ್ತರದ ಬೆಳ್ಳಿಯ ತುಪ್ಪ ದೀಪವನ್ನು ದೇವರಿಗೆ ಸಮರ್ಪಿಸಿ ಪ್ರಾರ್ಥಿಸಲಾಗುವುದು. ಹನ್ನೊಂದು ರುದ್ರ ರನ್ನು ಸಂಕಲ್ಪಿಸಿ ಸಕಲೋಪಚಾರಗಳಿಂದ ಪೂಜಿಸಿ, ವೈದಿಕರಿಗೆ ವಸ್ತ್ರ ಉತ್ತರೀಯ ಊಟೋಪಚಾರ ಕೊಟ್ಟು ಯಥಾ ಶಕ್ತಿ ದ್ರವ್ಯ ಗಂಟು ಕಟ್ಟಿ ಸಮರ್ಪಿಸಿ ಆಶೀರ್ವಾದ ಪೂರ್ವಕ ಮಂತ್ರಾಕ್ಷತೆ, ಪ್ರತಿವಚನ ಪಡೆಯುವ ಕಾರ್ಯಕ್ರಮ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸದಸ್ಯರಾದ ಶೇಖರ್ ನಾರಾವಿ, ಐತಪ್ಪ ನಾಯ್ಕ್, ರಾಮದಾಸ್ ಗೌಡ, ರವೀಂದ್ರನಾಥ್ ರೈ ಬಳ್ಳಮಜಲು, ರಾಮಚಂದ್ರ ಕಾಮತ್, ಪ್ರಧಾನ ಅರ್ಚಕ ವಿ. ಯಸ್. ಭಟ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

6 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

14 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

16 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

21 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

23 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago