Advertisement
ಸುದ್ದಿಗಳು

ಎ.10 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ | ಜಾತ್ರೆ ನಡೆಯುವ ಎಲ್ಲಾ ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ದೇವಸ್ಥಾನಕ್ಕೆ ಬರಲು ಆಡಳಿತ ಮಂಡಳಿ ಅಪೇಕ್ಷೆ |

Share

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಆಗಮನಕ್ಕೆ ಸಾಕ್ಷಿಯಾಗುವ ಜಾತ್ರಾ ಮಹೋತ್ಸವ ಈ ಬಾರಿ ಏಪ್ರಿಲ್ 10 ರಿಂದ 20 ರವರೆಗೆ ನಡೆಯಲಿದೆ. 10 ದಿನದ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಸಾಂಪ್ರದಾಯಿಕ ಉಡುಗೆ ತೊಟ್ಟು ಕ್ಷೇತ್ರಕ್ಕೆ ಬರಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿಕೊಂಡಿದೆ.

Advertisement
Advertisement
Advertisement
Advertisement

Advertisement

ದೇವಸ್ಥಾನದ ಜಾತ್ರಾ ಉತ್ಸವದ ಬಗ್ಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ ಮಾಹಿತಿ ನೀಡಿದರು. ಏಪ್ರಿಲ್ 10 ರಿಂದ 20 ರವರೆಗೆ  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವವು ನಡೆಯಲಿದೆ. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ ಎಂದರು. ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ. ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರ ಧರ್ಮದವರಿಗೆ ವ್ಯಾಪಾರ ನಿರ್ಬಂಧ ವಿಧಿಸಲಾಗುತ್ತಿದೆ. ಅಂತೆಯೇ ಪುತ್ತೂರು ಜಾತ್ರೆಯಲ್ಲಿ ಈ ಬಾರಿಯೂ ಅನ್ಯಧರ್ಮೀಯರಿಗೆ ವಿಶೇಷವಾಗಿ ಮುಸ್ಲಿಮರಿಗೆ ಸಂತೆ ವ್ಯಾಪಾರಕ್ಕೆ ಧಾರ್ಮಿಕ ದತ್ತಿ ಕಾಯ್ದೆ ಅನ್ವಯ ನಿರ್ಬಂಧ ವಿಧಿಸಲಾಗಿದೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

1 hour ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

1 hour ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

10 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

12 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

1 day ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

1 day ago