Advertisement
ಸುದ್ದಿಗಳು

ಎ.10 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ | ಜಾತ್ರೆ ನಡೆಯುವ ಎಲ್ಲಾ ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ದೇವಸ್ಥಾನಕ್ಕೆ ಬರಲು ಆಡಳಿತ ಮಂಡಳಿ ಅಪೇಕ್ಷೆ |

Share

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಆಗಮನಕ್ಕೆ ಸಾಕ್ಷಿಯಾಗುವ ಜಾತ್ರಾ ಮಹೋತ್ಸವ ಈ ಬಾರಿ ಏಪ್ರಿಲ್ 10 ರಿಂದ 20 ರವರೆಗೆ ನಡೆಯಲಿದೆ. 10 ದಿನದ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಸಾಂಪ್ರದಾಯಿಕ ಉಡುಗೆ ತೊಟ್ಟು ಕ್ಷೇತ್ರಕ್ಕೆ ಬರಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿಕೊಂಡಿದೆ.

ದೇವಸ್ಥಾನದ ಜಾತ್ರಾ ಉತ್ಸವದ ಬಗ್ಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ ಮಾಹಿತಿ ನೀಡಿದರು. ಏಪ್ರಿಲ್ 10 ರಿಂದ 20 ರವರೆಗೆ  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವವು ನಡೆಯಲಿದೆ. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ ಎಂದರು. ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ. ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರ ಧರ್ಮದವರಿಗೆ ವ್ಯಾಪಾರ ನಿರ್ಬಂಧ ವಿಧಿಸಲಾಗುತ್ತಿದೆ. ಅಂತೆಯೇ ಪುತ್ತೂರು ಜಾತ್ರೆಯಲ್ಲಿ ಈ ಬಾರಿಯೂ ಅನ್ಯಧರ್ಮೀಯರಿಗೆ ವಿಶೇಷವಾಗಿ ಮುಸ್ಲಿಮರಿಗೆ ಸಂತೆ ವ್ಯಾಪಾರಕ್ಕೆ ಧಾರ್ಮಿಕ ದತ್ತಿ ಕಾಯ್ದೆ ಅನ್ವಯ ನಿರ್ಬಂಧ ವಿಧಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

9 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

10 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

13 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

22 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

23 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

23 hours ago