Advertisement
ಸುದ್ದಿಗಳು

ಎ.10 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ | ಜಾತ್ರೆ ನಡೆಯುವ ಎಲ್ಲಾ ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ದೇವಸ್ಥಾನಕ್ಕೆ ಬರಲು ಆಡಳಿತ ಮಂಡಳಿ ಅಪೇಕ್ಷೆ |

Share

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಆಗಮನಕ್ಕೆ ಸಾಕ್ಷಿಯಾಗುವ ಜಾತ್ರಾ ಮಹೋತ್ಸವ ಈ ಬಾರಿ ಏಪ್ರಿಲ್ 10 ರಿಂದ 20 ರವರೆಗೆ ನಡೆಯಲಿದೆ. 10 ದಿನದ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಸಾಂಪ್ರದಾಯಿಕ ಉಡುಗೆ ತೊಟ್ಟು ಕ್ಷೇತ್ರಕ್ಕೆ ಬರಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿಕೊಂಡಿದೆ.

ದೇವಸ್ಥಾನದ ಜಾತ್ರಾ ಉತ್ಸವದ ಬಗ್ಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ ಮಾಹಿತಿ ನೀಡಿದರು. ಏಪ್ರಿಲ್ 10 ರಿಂದ 20 ರವರೆಗೆ  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವವು ನಡೆಯಲಿದೆ. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ ಎಂದರು. ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ. ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರ ಧರ್ಮದವರಿಗೆ ವ್ಯಾಪಾರ ನಿರ್ಬಂಧ ವಿಧಿಸಲಾಗುತ್ತಿದೆ. ಅಂತೆಯೇ ಪುತ್ತೂರು ಜಾತ್ರೆಯಲ್ಲಿ ಈ ಬಾರಿಯೂ ಅನ್ಯಧರ್ಮೀಯರಿಗೆ ವಿಶೇಷವಾಗಿ ಮುಸ್ಲಿಮರಿಗೆ ಸಂತೆ ವ್ಯಾಪಾರಕ್ಕೆ ಧಾರ್ಮಿಕ ದತ್ತಿ ಕಾಯ್ದೆ ಅನ್ವಯ ನಿರ್ಬಂಧ ವಿಧಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

24 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago