Advertisement
ಸುದ್ದಿಗಳು

ಎ.10 ರಿಂದ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆ | ಜಾತ್ರೆ ನಡೆಯುವ ಎಲ್ಲಾ ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ದೇವಸ್ಥಾನಕ್ಕೆ ಬರಲು ಆಡಳಿತ ಮಂಡಳಿ ಅಪೇಕ್ಷೆ |

Share

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಸಂಖ್ಯೆಯ ಭಕ್ತರ ಆಗಮನಕ್ಕೆ ಸಾಕ್ಷಿಯಾಗುವ ಜಾತ್ರಾ ಮಹೋತ್ಸವ ಈ ಬಾರಿ ಏಪ್ರಿಲ್ 10 ರಿಂದ 20 ರವರೆಗೆ ನಡೆಯಲಿದೆ. 10 ದಿನದ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಸಾಂಪ್ರದಾಯಿಕ ಉಡುಗೆ ತೊಟ್ಟು ಕ್ಷೇತ್ರಕ್ಕೆ ಬರಬೇಕು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮನವಿ ಮಾಡಿಕೊಂಡಿದೆ.

ದೇವಸ್ಥಾನದ ಜಾತ್ರಾ ಉತ್ಸವದ ಬಗ್ಗೆ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್‌ ಮುಳಿಯ ಮಾಹಿತಿ ನೀಡಿದರು. ಏಪ್ರಿಲ್ 10 ರಿಂದ 20 ರವರೆಗೆ  ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವವು ನಡೆಯಲಿದೆ. ಎಪ್ರಿಲ್ 10 ರಂದು ಬೆಳಿಗ್ಗೆ 9.25 ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಎಪ್ರಿಲ್‌ 16 ರಂದು ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ಭೇಟಿ, ಎಪ್ರಿಲ್ 17 ರಂದು ಸಿಡಿಮದ್ದು ಪ್ರದರ್ಶನ ಹಾಗು ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ನಡೆಯಲಿದೆ ಎಂದರು. ಈ ಬಾರಿ ದೇವರ ಪುಷ್ಕರಣಿಯಲ್ಲಿ ವರುಣ ದೇವರ ವಿಗ್ರಹದ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಪುಷ್ಕರಣಿಯಲ್ಲಿ ಇಳಿಯುವ ಭಕ್ತಾಧಿಗಳಿಗೆ ಕಡ್ಡಾಯ ವಸ್ತಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಕೇವಲ ಸಾಂಪ್ರದಾಯಿಕ ಉಡುಗೆಯಲ್ಲಿ ಬರುವ ಭಕ್ತಾಧಿಗಳಿಗೆ ಮಾತ್ರ ವರುಣ ದೇವರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದ ಅವರು ದೇವರ ಬ್ರಹ್ಮರಥ ಎಳೆಯುವ ಸೇವಾಕರ್ತರಿಗೂ ವಸ್ತ್ರಸಂಹಿತೆ ಕಡ್ಡಾಯವಾಗಿದೆ. ಜಾತ್ರೆ ನಡೆಯುವ ಹತ್ತು ದಿನವೂ ಭಕ್ತಾಧಿಗಳು ಸಾಂಪ್ರದಾಯಿಕ ಉಡುಗೆಯಲ್ಲೇ ದೇವಸ್ಥಾನಕ್ಕೆ ಬರಬೇಕು ಎನ್ನುವುದು ಸಮಿತಿಯ ಆಗ್ರಹವಾಗಿದೆ ಎಂದು ಅವರು ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಕರಾವಳಿಯ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಹಿಂದೂಯೇತರ ಧರ್ಮದವರಿಗೆ ವ್ಯಾಪಾರ ನಿರ್ಬಂಧ ವಿಧಿಸಲಾಗುತ್ತಿದೆ. ಅಂತೆಯೇ ಪುತ್ತೂರು ಜಾತ್ರೆಯಲ್ಲಿ ಈ ಬಾರಿಯೂ ಅನ್ಯಧರ್ಮೀಯರಿಗೆ ವಿಶೇಷವಾಗಿ ಮುಸ್ಲಿಮರಿಗೆ ಸಂತೆ ವ್ಯಾಪಾರಕ್ಕೆ ಧಾರ್ಮಿಕ ದತ್ತಿ ಕಾಯ್ದೆ ಅನ್ವಯ ನಿರ್ಬಂಧ ವಿಧಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago