ಪುತ್ತೂರಿಗೆ ಸುಸಜ್ಜಿತವಾದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಪುತ್ತೂರುಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿಯ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಸೋಮವಾರ ಪುತ್ತೂರಿನ ದರ್ಬೆಯಿಂದ ಬೊಳುವಾರುವರೆಗೆ ನಡೆಯಿತು.
ಪುತ್ತೂರಿನಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳನ್ನು ಚಿಕಿತ್ಸೆಗಾಗಿ ಮಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಸಾಗಿಸಬೇಕಾದ ಸ್ಥಿತಿ ಇದೆ. ಇದರಿಂದ ಬಡವರಿಗೆ ಸಂಕಷ್ಟವಾಗುತ್ತಿದೆ. ಈ ಕಾರಣಕ್ಕಾಗಿ ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕು, ಈ ಮೂಲಕ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆಗೇರಬೇಕು ಎಂದು ಆಗ್ರಹಿಸಿ ಹೋರಾಟ ನಡೆಯುತ್ತಿದೆ. ಇದರ ಅಂಗವಾಗಿ ಸೋಮವಾರ ಪುತ್ತೂರು ನಗರದಲ್ಲಿ ಕಾಲ್ನಡಿಗೆ ಜಾಥಾ ನಡೆಯಿತು.
ಮೆಡಿಕಲ್ ಕಾಲೇಜು ಹೋರಾಟ ಸಮಿತಿ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ಮತ್ತು ಗೌರವಾಧ್ಯಕ್ಷ ಅಣ್ಣಾ ವಿನಯಚಂದ್ರ ದರ್ಬೆಯಲ್ಲಿ ಜಾಥಾಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷರಾದ ಝೇವಿಯರ್ ಡಿ’ಸೋಜಾ, ಎ ರೂಪೇಶ್ ರೈ , ವಿಶ್ವಪ್ರಸಾದ್ ಸೇಡಿಯಾಪು, ಕಾರ್ಯಕಾರಿ ಸಮಿತಿ ಸದಸ್ಯರಾದ ಎಚ್.ಮಹಮ್ಮದ್ ಆಲಿ, ಮೌರಿಸ್ ಮಸ್ಕರೇನ್ಹಸ್, ಬಾಲಕೃಷ್ಣ ಗೌಡ ಕೆಮ್ಮಾರ, ಅಮಳ ರಾಮಚಂದ್ರ, ಡಾ.ಬಿ.ಕೆ.ವಿಷುಕುಮಾರ್, ರಾಜ್ಯ ದಾರಿಮಿ ಒಕ್ಕೂಟದ ಅಧ್ಯಕ್ಷ ಎಸ್.ಬಿ.ದಾರಿಮಿ, ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಜಾನ್ ಕುಟ್ಹೀನೊ, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಪೈ, ಸುಭಾಷ್ ರೈ ಬೆಳ್ಳಿಪ್ಪಾಡಿ, ಚಿಲ್ಮೆತ್ತಾರು ಸಂತೋಷ್, ನಗರಸಭೆ ಮಾಜಿ ಅಧ್ಯಕ್ಷೆ ಜಯಂತಿ ನಾಯಕ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಹೋರಾಟ ಸಮಿತಿ ಸಂಚಾಲಕ ಲಕ್ಷ್ಮೀಶ ಗಬ್ಲಡ್ಕ ಕಾರ್ಯಕ್ರಮ ನಿರ್ವಹಿಸಿದರು.
ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…
ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…
ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ ಹೆಚ್ಚಾಗುವ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…