ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಒತ್ತಾಯ | ಹೋರಾಟಕ್ಕೆ ವೇದಿಕೆ ಸಜ್ಜು |

November 22, 2022
10:14 PM

ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ  ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.

ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್‌ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್‌ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು.  ಮುಂದಿನ ದಿನಗಳಲ್ಲಿ  ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror