ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.
ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…