ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.
ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…