ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.
ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್(PM Kisan) ಯೋಜನೆ ಆರಂಭವಾದಗಿಂದಲೂ ರೈತರ(Farmer) ಖಾತೆಗೆ ನೇರವಾಗಿ…
ನಗರದಲ್ಲಿ ಮತದಾನ ಕಡಿಮೆಯಾಗಿರುವ ಬಗ್ಗೆ ಹಾಗೂ ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ಪ್ರಬಂಧ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…