ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.
ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…