Advertisement
ಸುದ್ದಿಗಳು

ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಒತ್ತಾಯ | ಹೋರಾಟಕ್ಕೆ ವೇದಿಕೆ ಸಜ್ಜು |

Share

ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ  ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.

ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್‌ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

Advertisement

ಮೆಡಿಕಲ್‌ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್‌ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು.  ಮುಂದಿನ ದಿನಗಳಲ್ಲಿ  ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

6 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

6 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

17 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

1 day ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

1 day ago