ಜನ ಆರೋಗ್ಯಕ್ಕಾಗಿ ನಾವು ಎನ್ನುವ ಆಶಯದಲ್ಲಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ರಚನೆಯಾಗಬೇಕು ಎಂದು ಒತ್ತಾಯಿಸಿ ಪುತ್ತೂರು ಸರ್ಕಾರಿ ಮೆಡಿಕಲ್ ಕಾಲೇಜು ಹೋರಾಟ ಸಮಿತಿ ರಚಿಸಲಾಗಿದೆ. ವಿವಿಧ ಹಂತಗಳಲ್ಲಿ ಈ ಬಗ್ಗೆ ಹೋರಾಟ ನಡೆಸಲಿ ಸಭೆ ನಿರ್ಧರಿಸಿದೆ. ರಾಜಕೀಯ ಒತ್ತಡ, ಸರ್ಕಾರಕ್ಕೆ ಒತ್ತಡ ತರುವುದು ಹಾಗೂ ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಬೇಕಾಗಿದೆ ಎಂಬುದರ ಸ್ಪಷ್ಟ ಕಲ್ಪನೆಯನ್ನು ಜನರಿಗೆ ಮನದಟ್ಟು ಮಾಡಲು ಈ ಸಮಿತಿ ನಿರ್ಧರಿಸಿದೆ.
ಪುತ್ತೂರಿನಲ್ಲಿ ಈಚೆಗೆ ನಡೆದ ಎರಡನೇ ಸಭೆಯಲ್ಲಿ ಸುಮಾರು 40 ಕ್ಕೂ ಅಧಿಕ ಮಂದಿ ಭಾಗವಹಿಸಿದರು. ಸುಳ್ಯ, ಪುತ್ತೂರು ಹಾಗೂ ಆಸುಪಾಸಿನ ಪ್ರದೇಶಗಳಿಂದ ಮೆಡಿಕಲ್ ಕಾಲೇಜು ರಚನೆ ಬಗ್ಗೆ ಆಸಕ್ತರು ಆಗಮಿಸಿದ್ದರು. ವಿವಿಧ ರಾಜಕೀಯ,ಸಾಮಾಜಿಕ ಗುಂಪುಗಳಲ್ಲಿ ಸಕ್ರಿಯವಾಗಿರುವ ಜನರು ಸಭೆಯಲ್ಲಿ ಭಾಗವಹಿಸಿದ್ದು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.
ಮೆಡಿಕಲ್ ಕಾಲೇಜು ಪುತ್ತೂರಿಗೆ ಏಕೆ ಅಗತ್ಯ ಇದೆ ಎಂಬುದರ ಬಗ್ಗೆ ಮಾಜಿ ಎಂಎಲ್ಸಿ ಅಣ್ಣಾ ವಿನಯಚಂದ್ರ ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ನಾಗರಿಕ ಸಂಘಟನೆಗಳ ಭೇಟಿ. ಮನವಿ ಪತ್ರ ರಚನೆ, ಸೇರಿದಂತೆ ಆಂದೋಲನ ನಡೆಸಲು ನಿರ್ಧರಿಸಲಾಯಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…
ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…