ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

July 5, 2024
2:46 PM
ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು ಅಗತ್ಯವಿದೆ. ಕೃಷಿಕರಿಗೆ ಬದುಕಿಗೆ ಧೈರ್ಯ ತುಂಬುವ ಕೆಲಸ ನಡೆಸಬೇಕಿದೆ ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.

Advertisement

ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದು‌ಶಾಸಕರು‌ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |
April 27, 2025
1:12 PM
by: ಸಾಯಿಶೇಖರ್ ಕರಿಕಳ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ
ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ
April 27, 2025
10:46 AM
by: The Rural Mirror ಸುದ್ದಿಜಾಲ
50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ
April 27, 2025
10:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group