Advertisement
MIRROR FOCUS

ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

Share

ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.

ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದು‌ಶಾಸಕರು‌ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

2 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago