ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.
ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನುಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದುಶಾಸಕರುಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…