ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.
ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನುಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದುಶಾಸಕರುಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…