Advertisement
MIRROR FOCUS

ಅಡಿಕೆ‌ ಹಳದಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ | ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

Share

ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.

ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದು‌ಶಾಸಕರು‌ಸಭೆಯ ಗಮನಕ್ಕೆ ತಂದರು.

ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

6 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

10 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

18 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

18 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

20 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

1 day ago