ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಇದೆ ಯಾವುದೇ ಔಷಧಿ ಸಿಂಪಡಣೆ ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಸಂಕಷ್ಟವಾಗಲಿದೆ ಎಂದು ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವರ ಗಮನ ಸೆಳೆದರು.
ಅಡಿಕೆ ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಟರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನುಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದುಶಾಸಕರುಸಭೆಯ ಗಮನಕ್ಕೆ ತಂದರು.
ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…