ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

December 30, 2023
3:44 PM
ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

ಕರಾವಳಿ ಹಾಗೂ ಮಲೆನಾಡು ಭಾಗದ ಅದರಲ್ಲೂ ಪುತ್ತೂರಿನ ಪ್ರಮುಖ ವಾಣಿಜ್ಯ ಬೆಳೆ , ಆರ್ಥಿಕ ಬೆಳೆ ಅಡಿಕೆ. ಈಗ ಅಡಿಕೆ ಬೆಲೆ ಕುಸಿತವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

Advertisement
Advertisement
ಅಶೋಕ್‌ ಕುಮಾರ್‌ ರೈ

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌ ಕುಮಾರ್‌ ರೈ,ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಕುಸಿತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅಡಿಕೆ ಆಮದು ಎಂಬುದ ಅಡಿಕೆ ವಲಯದ ಮಾಹಿತಿ. ಹೀಗಾಗಿ ಕೇಂದ್ರ ಸರ್ಕಾರವು ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಅಡಿಕೆ ಆಮದು ಆದರೆ ಅಡಿಕೆ ದರ 300 ರೂಪಾಯಿಗೆ ಕುಸಿತವಾಗುವ ಭೀತಿ ಇದೆ. ಹೀಗಾದರೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಇದಕ್ಕಾಗಿ ತಕ್ಷಣವೇ ಕ್ರಮ ಆಗಬೇಕು ಎಂದು ಒತ್ತಾಯಿಸಿದ ಅಶೋಕ್‌ ಕುಮಾರ್‌ ರೈ, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದೇ ಇದ್ದರೆ ರೈತರೆಲ್ಲೂ ಸೇರಿ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಇಲ್ಲಿಯ ರೈತರು ಅಡಿಕೆಯನ್ನೇ ಅಲವಂಬಿಸಿದ್ದಾರೆ ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು. ಸದ್ಯವೇ ದೆಹಲಿಗೆ ಭೇಟಿ  ನೀಡಿ ನಿರ್ಮಲಾ ಸೀತಾರಾಮ್‌  ಅವರನ್ನು ಭೇಟಿಯಾಗಿದೆ ಅಡಿಕೆ ಆಮದು ಕಡಿವಾಣಕ್ಕೆ ಒತ್ತಾಯಿಸಲಾಗುವುದು  ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು.

ಈಗಾಗಲೇ ಅಡಿಕೆ ಬೆಳೆಗಾರರು ಹಳದಿ ಎಲೆರೋಗ, ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಪಾಣಾಜೆ ಪ್ರದೇಶದಲ್ಲೂ ಹಳದಿ ಎಲೆರೋಗ ಇರುವ ಬಗ್ಗೆ ಮಾಹಿತಿ ಇದೆ. ಇದಕ್ಕಾಗಿ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ, ಸಿಪಿಸಿಆರ್‌ ಐ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ಅಡಿಕೆ ಬೆಳೆಗಾರರಿಗೆ ಬೆಳೆವಿಮೆ ತೀರಾ ಪ್ರಯೋಜನವಾಗಿದೆ. ಕೆಲವರು ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರದ ಪಾಲು, ರೈತರ ಪಾಲೂ ಇದೆ. ಕೇಂದ್ರ ಸರ್ಕಾರ ಮಾತ್ರವೇ ಬೆಳೆ ವಿಮೆ ನೀಡುವುದಲ್ಲ. ಕೇಂದ್ರ ಸರ್ಕಾರ ಮಾತ್ರವೇ ಬೆಳೆವಿಮೆ ನೀಡುವುದಾದರೆ ಪಕ್ಕದ ಕೇರಳ ರಾಜ್ಯದ ಅಡಿಕೆ ಬೆಳೆಗಾರರಿಗೆ ಏಕೆ ಸಿಗುತ್ತಿಲ್ಲ ಎಂದು ಅಶೋಕ್‌ ಕುಮಾರ್‌ ರೈ ಪ್ರಶ್ನಿಸಿದರು.

Advertisement

Arecanut prices now falling. The central government should immediately change the import policy. Puttur MLA Ashok Kumar Rai has demanded that appropriate action should be taken to prevent the import of Arecanut.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವಪರಿಸರ ದಿನ | ತಾಯಿಯ ಹೆಸರಲ್ಲಿ ಒಂದು ಮರ -2.0 ಅಭಿಯಾನ
June 5, 2025
7:47 AM
by: The Rural Mirror ಸುದ್ದಿಜಾಲ
ಮದುವೆಯ ವಿಳಂಬಕ್ಕೆ ಈ ಕಾರಣವೂ ಇರಬಹುದು..! ಪರಿಹಾರ ಕ್ರಮಗಳು ಇಲ್ಲಿದೆ ನೋಡಿ
June 5, 2025
7:17 AM
by: ದ ರೂರಲ್ ಮಿರರ್.ಕಾಂ
ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |
June 4, 2025
11:06 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು
June 4, 2025
7:27 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group