Advertisement
MIRROR FOCUS

ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

Share

ಕರಾವಳಿ ಹಾಗೂ ಮಲೆನಾಡು ಭಾಗದ ಅದರಲ್ಲೂ ಪುತ್ತೂರಿನ ಪ್ರಮುಖ ವಾಣಿಜ್ಯ ಬೆಳೆ , ಆರ್ಥಿಕ ಬೆಳೆ ಅಡಿಕೆ. ಈಗ ಅಡಿಕೆ ಬೆಲೆ ಕುಸಿತವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

ಅಶೋಕ್‌ ಕುಮಾರ್‌ ರೈ

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌ ಕುಮಾರ್‌ ರೈ,ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಕುಸಿತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅಡಿಕೆ ಆಮದು ಎಂಬುದ ಅಡಿಕೆ ವಲಯದ ಮಾಹಿತಿ. ಹೀಗಾಗಿ ಕೇಂದ್ರ ಸರ್ಕಾರವು ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಅಡಿಕೆ ಆಮದು ಆದರೆ ಅಡಿಕೆ ದರ 300 ರೂಪಾಯಿಗೆ ಕುಸಿತವಾಗುವ ಭೀತಿ ಇದೆ. ಹೀಗಾದರೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಇದಕ್ಕಾಗಿ ತಕ್ಷಣವೇ ಕ್ರಮ ಆಗಬೇಕು ಎಂದು ಒತ್ತಾಯಿಸಿದ ಅಶೋಕ್‌ ಕುಮಾರ್‌ ರೈ, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದೇ ಇದ್ದರೆ ರೈತರೆಲ್ಲೂ ಸೇರಿ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಇಲ್ಲಿಯ ರೈತರು ಅಡಿಕೆಯನ್ನೇ ಅಲವಂಬಿಸಿದ್ದಾರೆ ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು. ಸದ್ಯವೇ ದೆಹಲಿಗೆ ಭೇಟಿ  ನೀಡಿ ನಿರ್ಮಲಾ ಸೀತಾರಾಮ್‌  ಅವರನ್ನು ಭೇಟಿಯಾಗಿದೆ ಅಡಿಕೆ ಆಮದು ಕಡಿವಾಣಕ್ಕೆ ಒತ್ತಾಯಿಸಲಾಗುವುದು  ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು.

ಈಗಾಗಲೇ ಅಡಿಕೆ ಬೆಳೆಗಾರರು ಹಳದಿ ಎಲೆರೋಗ, ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಪಾಣಾಜೆ ಪ್ರದೇಶದಲ್ಲೂ ಹಳದಿ ಎಲೆರೋಗ ಇರುವ ಬಗ್ಗೆ ಮಾಹಿತಿ ಇದೆ. ಇದಕ್ಕಾಗಿ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ, ಸಿಪಿಸಿಆರ್‌ ಐ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ಅಡಿಕೆ ಬೆಳೆಗಾರರಿಗೆ ಬೆಳೆವಿಮೆ ತೀರಾ ಪ್ರಯೋಜನವಾಗಿದೆ. ಕೆಲವರು ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರದ ಪಾಲು, ರೈತರ ಪಾಲೂ ಇದೆ. ಕೇಂದ್ರ ಸರ್ಕಾರ ಮಾತ್ರವೇ ಬೆಳೆ ವಿಮೆ ನೀಡುವುದಲ್ಲ. ಕೇಂದ್ರ ಸರ್ಕಾರ ಮಾತ್ರವೇ ಬೆಳೆವಿಮೆ ನೀಡುವುದಾದರೆ ಪಕ್ಕದ ಕೇರಳ ರಾಜ್ಯದ ಅಡಿಕೆ ಬೆಳೆಗಾರರಿಗೆ ಏಕೆ ಸಿಗುತ್ತಿಲ್ಲ ಎಂದು ಅಶೋಕ್‌ ಕುಮಾರ್‌ ರೈ ಪ್ರಶ್ನಿಸಿದರು.

Arecanut prices now falling. The central government should immediately change the import policy. Puttur MLA Ashok Kumar Rai has demanded that appropriate action should be taken to prevent the import of Arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆಚುಕ್ಕೆ ರೋಗ | ತಕ್ಷಣದ ಪರಿಹಾರಕ್ಕಿಂತ ವೈಜ್ಞಾನಿಕ ನಿರ್ವಹಣೆ ಮುಖ್ಯ | 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ ಪರಿಹಾರ

ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…

5 hours ago

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

9 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

9 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

21 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago