Advertisement
MIRROR FOCUS

ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

Share

ಕರಾವಳಿ ಹಾಗೂ ಮಲೆನಾಡು ಭಾಗದ ಅದರಲ್ಲೂ ಪುತ್ತೂರಿನ ಪ್ರಮುಖ ವಾಣಿಜ್ಯ ಬೆಳೆ , ಆರ್ಥಿಕ ಬೆಳೆ ಅಡಿಕೆ. ಈಗ ಅಡಿಕೆ ಬೆಲೆ ಕುಸಿತವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

Advertisement
Advertisement
ಅಶೋಕ್‌ ಕುಮಾರ್‌ ರೈ

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌ ಕುಮಾರ್‌ ರೈ,ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಕುಸಿತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅಡಿಕೆ ಆಮದು ಎಂಬುದ ಅಡಿಕೆ ವಲಯದ ಮಾಹಿತಿ. ಹೀಗಾಗಿ ಕೇಂದ್ರ ಸರ್ಕಾರವು ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಅಡಿಕೆ ಆಮದು ಆದರೆ ಅಡಿಕೆ ದರ 300 ರೂಪಾಯಿಗೆ ಕುಸಿತವಾಗುವ ಭೀತಿ ಇದೆ. ಹೀಗಾದರೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಇದಕ್ಕಾಗಿ ತಕ್ಷಣವೇ ಕ್ರಮ ಆಗಬೇಕು ಎಂದು ಒತ್ತಾಯಿಸಿದ ಅಶೋಕ್‌ ಕುಮಾರ್‌ ರೈ, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದೇ ಇದ್ದರೆ ರೈತರೆಲ್ಲೂ ಸೇರಿ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಇಲ್ಲಿಯ ರೈತರು ಅಡಿಕೆಯನ್ನೇ ಅಲವಂಬಿಸಿದ್ದಾರೆ ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು. ಸದ್ಯವೇ ದೆಹಲಿಗೆ ಭೇಟಿ  ನೀಡಿ ನಿರ್ಮಲಾ ಸೀತಾರಾಮ್‌  ಅವರನ್ನು ಭೇಟಿಯಾಗಿದೆ ಅಡಿಕೆ ಆಮದು ಕಡಿವಾಣಕ್ಕೆ ಒತ್ತಾಯಿಸಲಾಗುವುದು  ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು.

Advertisement

ಈಗಾಗಲೇ ಅಡಿಕೆ ಬೆಳೆಗಾರರು ಹಳದಿ ಎಲೆರೋಗ, ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಪಾಣಾಜೆ ಪ್ರದೇಶದಲ್ಲೂ ಹಳದಿ ಎಲೆರೋಗ ಇರುವ ಬಗ್ಗೆ ಮಾಹಿತಿ ಇದೆ. ಇದಕ್ಕಾಗಿ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ, ಸಿಪಿಸಿಆರ್‌ ಐ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

Advertisement

ಅಡಿಕೆ ಬೆಳೆಗಾರರಿಗೆ ಬೆಳೆವಿಮೆ ತೀರಾ ಪ್ರಯೋಜನವಾಗಿದೆ. ಕೆಲವರು ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರದ ಪಾಲು, ರೈತರ ಪಾಲೂ ಇದೆ. ಕೇಂದ್ರ ಸರ್ಕಾರ ಮಾತ್ರವೇ ಬೆಳೆ ವಿಮೆ ನೀಡುವುದಲ್ಲ. ಕೇಂದ್ರ ಸರ್ಕಾರ ಮಾತ್ರವೇ ಬೆಳೆವಿಮೆ ನೀಡುವುದಾದರೆ ಪಕ್ಕದ ಕೇರಳ ರಾಜ್ಯದ ಅಡಿಕೆ ಬೆಳೆಗಾರರಿಗೆ ಏಕೆ ಸಿಗುತ್ತಿಲ್ಲ ಎಂದು ಅಶೋಕ್‌ ಕುಮಾರ್‌ ರೈ ಪ್ರಶ್ನಿಸಿದರು.

Arecanut prices now falling. The central government should immediately change the import policy. Puttur MLA Ashok Kumar Rai has demanded that appropriate action should be taken to prevent the import of Arecanut.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

ನಾಗಾಲ್ಯಾಂಡ್‌ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…

11 hours ago

ರೈತರಿಗೆ ₹ 21,000 ಕೋಟಿ ನೆರವು | 100 ಹೊಸ ಕೃಷಿ ವಿಧಾನಗಳ ಅಭಿವೃದ್ಧಿ |

ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ  ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…

12 hours ago

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ…

12 hours ago

ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್…

12 hours ago

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

20 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

1 day ago