MIRROR FOCUS

ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರಾವಳಿ ಹಾಗೂ ಮಲೆನಾಡು ಭಾಗದ ಅದರಲ್ಲೂ ಪುತ್ತೂರಿನ ಪ್ರಮುಖ ವಾಣಿಜ್ಯ ಬೆಳೆ , ಆರ್ಥಿಕ ಬೆಳೆ ಅಡಿಕೆ. ಈಗ ಅಡಿಕೆ ಬೆಲೆ ಕುಸಿತವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

Advertisement
ಅಶೋಕ್‌ ಕುಮಾರ್‌ ರೈ

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌ ಕುಮಾರ್‌ ರೈ,ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಕುಸಿತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅಡಿಕೆ ಆಮದು ಎಂಬುದ ಅಡಿಕೆ ವಲಯದ ಮಾಹಿತಿ. ಹೀಗಾಗಿ ಕೇಂದ್ರ ಸರ್ಕಾರವು ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಅಡಿಕೆ ಆಮದು ಆದರೆ ಅಡಿಕೆ ದರ 300 ರೂಪಾಯಿಗೆ ಕುಸಿತವಾಗುವ ಭೀತಿ ಇದೆ. ಹೀಗಾದರೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಇದಕ್ಕಾಗಿ ತಕ್ಷಣವೇ ಕ್ರಮ ಆಗಬೇಕು ಎಂದು ಒತ್ತಾಯಿಸಿದ ಅಶೋಕ್‌ ಕುಮಾರ್‌ ರೈ, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದೇ ಇದ್ದರೆ ರೈತರೆಲ್ಲೂ ಸೇರಿ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಇಲ್ಲಿಯ ರೈತರು ಅಡಿಕೆಯನ್ನೇ ಅಲವಂಬಿಸಿದ್ದಾರೆ ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು. ಸದ್ಯವೇ ದೆಹಲಿಗೆ ಭೇಟಿ  ನೀಡಿ ನಿರ್ಮಲಾ ಸೀತಾರಾಮ್‌  ಅವರನ್ನು ಭೇಟಿಯಾಗಿದೆ ಅಡಿಕೆ ಆಮದು ಕಡಿವಾಣಕ್ಕೆ ಒತ್ತಾಯಿಸಲಾಗುವುದು  ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು.

ಈಗಾಗಲೇ ಅಡಿಕೆ ಬೆಳೆಗಾರರು ಹಳದಿ ಎಲೆರೋಗ, ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಪಾಣಾಜೆ ಪ್ರದೇಶದಲ್ಲೂ ಹಳದಿ ಎಲೆರೋಗ ಇರುವ ಬಗ್ಗೆ ಮಾಹಿತಿ ಇದೆ. ಇದಕ್ಕಾಗಿ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ, ಸಿಪಿಸಿಆರ್‌ ಐ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ಅಡಿಕೆ ಬೆಳೆಗಾರರಿಗೆ ಬೆಳೆವಿಮೆ ತೀರಾ ಪ್ರಯೋಜನವಾಗಿದೆ. ಕೆಲವರು ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರದ ಪಾಲು, ರೈತರ ಪಾಲೂ ಇದೆ. ಕೇಂದ್ರ ಸರ್ಕಾರ ಮಾತ್ರವೇ ಬೆಳೆ ವಿಮೆ ನೀಡುವುದಲ್ಲ. ಕೇಂದ್ರ ಸರ್ಕಾರ ಮಾತ್ರವೇ ಬೆಳೆವಿಮೆ ನೀಡುವುದಾದರೆ ಪಕ್ಕದ ಕೇರಳ ರಾಜ್ಯದ ಅಡಿಕೆ ಬೆಳೆಗಾರರಿಗೆ ಏಕೆ ಸಿಗುತ್ತಿಲ್ಲ ಎಂದು ಅಶೋಕ್‌ ಕುಮಾರ್‌ ರೈ ಪ್ರಶ್ನಿಸಿದರು.

Advertisement

Arecanut prices now falling. The central government should immediately change the import policy. Puttur MLA Ashok Kumar Rai has demanded that appropriate action should be taken to prevent the import of Arecanut.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

21 minutes ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

29 minutes ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

9 hours ago

ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….

ನಾವೊಂದು ಯೋಚನೆ ಮಾಡಿದ್ದೇವೆ.  ಎಲ್ಲಾ ಕಡೆ ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. ನಗರ…

13 hours ago

ವೃಷಭದಲ್ಲಿ ಶುಕ್ರ ಸಂಚಾರದಿಂದ ಮಹಾಲಕ್ಷ್ಮೀ ರಾಜಯೋಗ

ವೃಷಭ ರಾಶಿಯಲ್ಲಿ ಶುಕ್ರನ ಸಂಚಾರ ಒಂದು ಶುಭಕರವಾದ ಮತ್ತು ಧನವೃದ್ಧಿಯ ತತ್ವವನ್ನು ಸಾರುವ…

17 hours ago