Advertisement
MIRROR FOCUS

ಅಡಿಕೆ ಆಮದು ಬಗ್ಗೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯ |

Share

ಕರಾವಳಿ ಹಾಗೂ ಮಲೆನಾಡು ಭಾಗದ ಅದರಲ್ಲೂ ಪುತ್ತೂರಿನ ಪ್ರಮುಖ ವಾಣಿಜ್ಯ ಬೆಳೆ , ಆರ್ಥಿಕ ಬೆಳೆ ಅಡಿಕೆ. ಈಗ ಅಡಿಕೆ ಬೆಲೆ ಕುಸಿತವಾಗುತ್ತಿದೆ. ಕೇಂದ್ರ ಸರ್ಕಾರ ತಕ್ಷಣವೇ ಆಮದು ನೀತಿಯನ್ನು ಬದಲು ಮಾಡಬೇಕು. ಆಮದು ಅಡಿಕೆಯನ್ನು ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

ಅಶೋಕ್‌ ಕುಮಾರ್‌ ರೈ

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್‌ ಕುಮಾರ್‌ ರೈ,ಅಡಿಕೆ ಧಾರಣೆ ಕಳೆದ ಕೆಲವು ದಿನಗಳಿಂದ ಕುಸಿತವಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ ಅಡಿಕೆ ಆಮದು ಎಂಬುದ ಅಡಿಕೆ ವಲಯದ ಮಾಹಿತಿ. ಹೀಗಾಗಿ ಕೇಂದ್ರ ಸರ್ಕಾರವು ಆಮದು ನೀತಿಯಿಂದ ಅಡಿಕೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ಇದೇ ರೀತಿ ಅಡಿಕೆ ಆಮದು ಆದರೆ ಅಡಿಕೆ ದರ 300 ರೂಪಾಯಿಗೆ ಕುಸಿತವಾಗುವ ಭೀತಿ ಇದೆ. ಹೀಗಾದರೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಇದಕ್ಕಾಗಿ ತಕ್ಷಣವೇ ಕ್ರಮ ಆಗಬೇಕು ಎಂದು ಒತ್ತಾಯಿಸಿದ ಅಶೋಕ್‌ ಕುಮಾರ್‌ ರೈ, ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿ ಆಮದು ನಿಲ್ಲಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗುತ್ತಿದೆ. ಇಲ್ಲದೇ ಇದ್ದರೆ ರೈತರೆಲ್ಲೂ ಸೇರಿ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು, ಇಲ್ಲಿಯ ರೈತರು ಅಡಿಕೆಯನ್ನೇ ಅಲವಂಬಿಸಿದ್ದಾರೆ ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು. ಸದ್ಯವೇ ದೆಹಲಿಗೆ ಭೇಟಿ  ನೀಡಿ ನಿರ್ಮಲಾ ಸೀತಾರಾಮ್‌  ಅವರನ್ನು ಭೇಟಿಯಾಗಿದೆ ಅಡಿಕೆ ಆಮದು ಕಡಿವಾಣಕ್ಕೆ ಒತ್ತಾಯಿಸಲಾಗುವುದು  ಎಂದು ಅಶೋಕ್‌ ಕುಮಾರ್‌ ರೈ ಹೇಳಿದರು.

ಈಗಾಗಲೇ ಅಡಿಕೆ ಬೆಳೆಗಾರರು ಹಳದಿ ಎಲೆರೋಗ, ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಪಾಣಾಜೆ ಪ್ರದೇಶದಲ್ಲೂ ಹಳದಿ ಎಲೆರೋಗ ಇರುವ ಬಗ್ಗೆ ಮಾಹಿತಿ ಇದೆ. ಇದಕ್ಕಾಗಿ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ, ಸಿಪಿಸಿಆರ್‌ ಐ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು.

ಅಡಿಕೆ ಬೆಳೆಗಾರರಿಗೆ ಬೆಳೆವಿಮೆ ತೀರಾ ಪ್ರಯೋಜನವಾಗಿದೆ. ಕೆಲವರು ಇದು ಕೇಂದ್ರ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.ಬೆಳೆ ವಿಮೆಯಲ್ಲಿ ರಾಜ್ಯ ಸರ್ಕಾರದ ಪಾಲು, ರೈತರ ಪಾಲೂ ಇದೆ. ಕೇಂದ್ರ ಸರ್ಕಾರ ಮಾತ್ರವೇ ಬೆಳೆ ವಿಮೆ ನೀಡುವುದಲ್ಲ. ಕೇಂದ್ರ ಸರ್ಕಾರ ಮಾತ್ರವೇ ಬೆಳೆವಿಮೆ ನೀಡುವುದಾದರೆ ಪಕ್ಕದ ಕೇರಳ ರಾಜ್ಯದ ಅಡಿಕೆ ಬೆಳೆಗಾರರಿಗೆ ಏಕೆ ಸಿಗುತ್ತಿಲ್ಲ ಎಂದು ಅಶೋಕ್‌ ಕುಮಾರ್‌ ರೈ ಪ್ರಶ್ನಿಸಿದರು.

Arecanut prices now falling. The central government should immediately change the import policy. Puttur MLA Ashok Kumar Rai has demanded that appropriate action should be taken to prevent the import of Arecanut.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

6 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

6 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

6 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

16 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

17 hours ago