ಅಡಿಕೆ ಬೆಳೆಗಾರರ ಜೊತೆಗಿದ್ದೇನೆ | ಅಡಿಕೆ ಆಮದು ತಡೆಯಾಗಲು ಕ್ರಮಕ್ಕೆ ಒತ್ತಾಯ – ಶಾಸಕ ಅಶೋಕ್‌ ಕುಮಾರ್‌ ರೈ

December 22, 2023
11:15 PM
ಅಡಿಕೆ ಆಮದು ಸಂಪೂರ್ಣ ನಿಯಂತ್ರಿಸಲು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಒತ್ತಾಯಿಸಿದ್ದಾರೆ.

ಅಡಿಕೆ ಬೆಳೆಗಾರರ ಹಿತಕ್ಕಾಗಿ ಸದಾ ಕೆಲಸ ಮಾಡುತ್ತೇನೆ. ಈಗ ಅಡಿಕೆ ಆಮದು ತಡೆಗೆ ತಕ್ಷಣವೇ ಕ್ರಮವಾಗಬೇಕು. ಇದಕ್ಕಾಗಿ ಸಂಸದರು, ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಡಿಕೆ ಆಮದು ಬಗ್ಗೆ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಈಚೆಗೆ ಬೆಂಗಳೂರಿನಲ್ಲಿ 12 ಮೆಟ್ರಿಕ್‌ ಟನ್‌ ಅಡಿಕೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಬಳಿ ಅಧೀವೇಶನದಲ್ಲಿ ಪ್ರಸ್ತಾಪಿಸಲಾಗಿತ್ತು. ಚಾಲಿ ಅಡಿಕೆ ಹೆಚ್ಚಾಗಿ ಇರುವುದು  ಕರಾವಳಿ ಭಾಗದಲ್ಲಿ. ಈಗ ಇಲ್ಲಿನ ಅಡಿಕೆ ಜೊತೆಗೆ ಮಿಶ್ರಣ ಮಾಡಿ ಅಡಿಕೆ ಮಾರಾಟ ಮಾಡುವ ಬಗ್ಗೆ ವರದಿಗಳು ಇದೆ. ಹೀಗಾಗಿ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಹಾಗೂ ಆಮದು ಕಡಿವಾಣ ಮಾಡಲು ಕೇಂದ್ರ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ. ಅಡಿಕೆ ಬೆಳೆಗಾರರ ಜೊತೆ ಇದ್ದೇನೆ ಎಂದು ಶಾಸಕ ಅಶೋಕ್‌ ಕುಮಾರ್‌ ರೈ ಹೇಳಿದ್ದಾರೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror