ಅಡಿಕೆ ಬೆಳೆಗಾರರ ಹಿತಕ್ಕಾಗಿ ಸದಾ ಕೆಲಸ ಮಾಡುತ್ತೇನೆ. ಈಗ ಅಡಿಕೆ ಆಮದು ತಡೆಗೆ ತಕ್ಷಣವೇ ಕ್ರಮವಾಗಬೇಕು. ಇದಕ್ಕಾಗಿ ಸಂಸದರು, ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಡಿಕೆ ಆಮದು ಬಗ್ಗೆ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಈಚೆಗೆ ಬೆಂಗಳೂರಿನಲ್ಲಿ 12 ಮೆಟ್ರಿಕ್ ಟನ್ ಅಡಿಕೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಬಳಿ ಅಧೀವೇಶನದಲ್ಲಿ ಪ್ರಸ್ತಾಪಿಸಲಾಗಿತ್ತು. ಚಾಲಿ ಅಡಿಕೆ ಹೆಚ್ಚಾಗಿ ಇರುವುದು ಕರಾವಳಿ ಭಾಗದಲ್ಲಿ. ಈಗ ಇಲ್ಲಿನ ಅಡಿಕೆ ಜೊತೆಗೆ ಮಿಶ್ರಣ ಮಾಡಿ ಅಡಿಕೆ ಮಾರಾಟ ಮಾಡುವ ಬಗ್ಗೆ ವರದಿಗಳು ಇದೆ. ಹೀಗಾಗಿ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಹಾಗೂ ಆಮದು ಕಡಿವಾಣ ಮಾಡಲು ಕೇಂದ್ರ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ. ಅಡಿಕೆ ಬೆಳೆಗಾರರ ಜೊತೆ ಇದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…