ಅಡಿಕೆ ಬೆಳೆಗಾರರ ಹಿತಕ್ಕಾಗಿ ಸದಾ ಕೆಲಸ ಮಾಡುತ್ತೇನೆ. ಈಗ ಅಡಿಕೆ ಆಮದು ತಡೆಗೆ ತಕ್ಷಣವೇ ಕ್ರಮವಾಗಬೇಕು. ಇದಕ್ಕಾಗಿ ಸಂಸದರು, ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಡಿಕೆ ಆಮದು ಬಗ್ಗೆ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಈಚೆಗೆ ಬೆಂಗಳೂರಿನಲ್ಲಿ 12 ಮೆಟ್ರಿಕ್ ಟನ್ ಅಡಿಕೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಬಳಿ ಅಧೀವೇಶನದಲ್ಲಿ ಪ್ರಸ್ತಾಪಿಸಲಾಗಿತ್ತು. ಚಾಲಿ ಅಡಿಕೆ ಹೆಚ್ಚಾಗಿ ಇರುವುದು ಕರಾವಳಿ ಭಾಗದಲ್ಲಿ. ಈಗ ಇಲ್ಲಿನ ಅಡಿಕೆ ಜೊತೆಗೆ ಮಿಶ್ರಣ ಮಾಡಿ ಅಡಿಕೆ ಮಾರಾಟ ಮಾಡುವ ಬಗ್ಗೆ ವರದಿಗಳು ಇದೆ. ಹೀಗಾಗಿ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಹಾಗೂ ಆಮದು ಕಡಿವಾಣ ಮಾಡಲು ಕೇಂದ್ರ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ. ಅಡಿಕೆ ಬೆಳೆಗಾರರ ಜೊತೆ ಇದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…