ಅಡಿಕೆ ಬೆಳೆಗಾರರ ಹಿತಕ್ಕಾಗಿ ಸದಾ ಕೆಲಸ ಮಾಡುತ್ತೇನೆ. ಈಗ ಅಡಿಕೆ ಆಮದು ತಡೆಗೆ ತಕ್ಷಣವೇ ಕ್ರಮವಾಗಬೇಕು. ಇದಕ್ಕಾಗಿ ಸಂಸದರು, ಕೇಂದ್ರ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಡಿಕೆ ಆಮದು ಬಗ್ಗೆ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಈಚೆಗೆ ಬೆಂಗಳೂರಿನಲ್ಲಿ 12 ಮೆಟ್ರಿಕ್ ಟನ್ ಅಡಿಕೆ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಬಳಿ ಅಧೀವೇಶನದಲ್ಲಿ ಪ್ರಸ್ತಾಪಿಸಲಾಗಿತ್ತು. ಚಾಲಿ ಅಡಿಕೆ ಹೆಚ್ಚಾಗಿ ಇರುವುದು ಕರಾವಳಿ ಭಾಗದಲ್ಲಿ. ಈಗ ಇಲ್ಲಿನ ಅಡಿಕೆ ಜೊತೆಗೆ ಮಿಶ್ರಣ ಮಾಡಿ ಅಡಿಕೆ ಮಾರಾಟ ಮಾಡುವ ಬಗ್ಗೆ ವರದಿಗಳು ಇದೆ. ಹೀಗಾಗಿ ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಹಾಗೂ ಆಮದು ಕಡಿವಾಣ ಮಾಡಲು ಕೇಂದ್ರ ಸಚಿವರು, ಸಂಸದರು ಹಾಗೂ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಆಮದು ಕಡಿವಾಣಕ್ಕೆ ಒತ್ತಾಯಿಸುತ್ತೇನೆ. ಅಡಿಕೆ ಬೆಳೆಗಾರರ ಜೊತೆ ಇದ್ದೇನೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…