ಸರ್ಕಾರ ಉಚಿತ ಕೊಡುಗೆಗಳ ಮೂಲಕ ರಾಜ್ಯದಲ್ಲಿ ಗಮನ ಸೆಳೆದಿದೆ. ದಕ್ಷಿಣ ಕನ್ನಡದಲ್ಲಿ ಈ ಉಚಿತಗಳ ಬಗ್ಗೆ ಒಲವು ಕಡಿಮೆ. ಇಲ್ಲಿ ಉಚಿತಗಳ ಹೊರತಾಗಿ ಜನಪರ ಆಡಳಿತವನ್ನು ಜನರು ಬಯಸುತ್ತಾರೆ. ಇದೀಗ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಭ್ರಷ್ಟಾಚಾರ ಮುಕ್ತ ಹೆಜ್ಜಯ ಕಡೆಗೆ ಗಮನಹರಿಸಿದ್ದಾರೆ. ಈಚೆಗೆ ಗ್ರಾಮಕರಣಿಕರೋರ್ವರು ಪಡೆದ ಲಂಚದ ಹಣವನ್ನು ವಾಪಾಸ್ ನೀಡಿಸುವ ಮೂಲಕ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುತ್ವದ ಟ್ರೆಂಡ್ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ವಿರೋಧಿ ಅಭಿಪ್ರಾಯಗಳು ಹೆಚ್ಚಾಗಿದ್ದವು. ಅದರಲ್ಲೂ ಉಚಿತ ಕೊಡುಗೆಗಳ ಬಗ್ಗೆ ಬಹುತೇಕ ಋಣಾತ್ಮಕ ಪ್ರತಿಕ್ರಿಯೆಗಳು ಇದ್ದವು. ಈ ಎಲ್ಲದರ ನಡುವೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಜನಪರವಾದ ಅಭಿಪ್ರಾಯವನ್ನು ರೂಪಿಸುತ್ತಿದ್ದಾರೆ. ಆಯ್ಕೆಯಾದ ಬಳಿಕ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಯನ್ನು ನೀಡಿದ್ದರು. ಈಗಾಗಲೇ ಒಂದೆರಡು ಪ್ರಕರಣದಲ್ಲಿ ಬಡವರಿಗೆ ನ್ಯಾಯ ದೊರಕಿಸಿದ್ದರು. ಇದೀಗ ಗ್ರಾಮಕರಣಿಕರೊಬ್ಬರು ಕಡತ ವಿಲೇವಾರಿಗೆ ಪಡೆದ ಲಂಚದ ಹಣದ ಸಹಿತ 5 ಸಾವಿರ ರೂಪಾಯಿ ಹೆಚ್ಚುವರಿ ಸೇರಿಸಿ ಮರಳಿಸುವಂತೆ ಸೂಚನ ನೀಡಿದ್ದಾರೆ. ಅದಕ್ಕೂ ಮೊದಲು ಶೇಂದಿ ಸರಬರಾಜು ಮಾಡುವ ವ್ಯಕ್ತಿಯಿಂದ ಇಲಾಖೆಯ ಅಧಿಕಾರಿಗಳು ಪಡೆದ ಲಂಚವನ್ನೂ ಹಿಂತಿರುಗಿಸುವಂತೆ ಮಾಡಿದ್ದರು. ಇದೀಗ ಶಾಸಕರ ಈ ನಡೆ ಮೆಚ್ಚುಗೆ ಪಡೆಯುತ್ತಿದ್ದು, ಅಧಿಕಾರಿಗಳು ಲಂಚ ಪಡೆದರೆ, ಕೇಳಿದರೆ ಶಾಸಕರಿಗೆ ಹೇಳಿದರೆ ಸರಿಯಾಗುತ್ತದೆ ಎನ್ನುವ ಭಾವನೆ ಬೆಳೆಯುತ್ತಿದೆ.
ಜಮೀನಿಗೆ ಸಂಬಂಧಪಟ್ಟ ಕಡತವನ್ನು ವಿಲೇವಾರಿ ಮಾಡುವ ವೇಳೆ ಗ್ರಾಮ ಕರಣಿಕರೊಬ್ಬರು ಲಂಚ ಪಡೆದಿದ್ದರು. ನಾನು ಲಂಚ ಕೊಡುವುದಿಲ್ಲ ಶಾಸಕರಲ್ಲಿ ದೂರು ನೀಡುವುದಾಗಿ ವ್ಯಕ್ತಿ ಹೇಳಿದಾಗಲೂ ಗ್ರಾಮಕರಣಿಕರು ಲಂಚ ಪಡೆದಿದ್ದರು.ಲಂಚ ನೀಡಿದ ವ್ಯಕ್ತಿ ಶಾಸಕರಲ್ಲಿ ದೂರು ನೀಡಿದ್ದು 24 ಗಂಟೆಯೊಳಗೆ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.
ಅದೇ ರೀತಿ ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ. ಲಂಚ,ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಮತ್ತೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…