Advertisement
ಸುದ್ದಿಗಳು

#AshokKumarRai | ಲಂಚ ವಾಪಾಸ್‌ ಮಾಡಿಸಿದ ಪುತ್ತೂರು ಶಾಸಕರು | ಶಾಸಕರ ಜನಪರ ನಡೆಗೆ ಮೆಚ್ಚುಗೆ | ಭ್ರಷ್ಟಾಚಾರ ಮುಕ್ತ ಪುತ್ತೂರಿಗೆ ಹೆಜ್ಜೆ ? |

Share

ಸರ್ಕಾರ ಉಚಿತ ಕೊಡುಗೆಗಳ ಮೂಲಕ ರಾಜ್ಯದಲ್ಲಿ  ಗಮನ ಸೆಳೆದಿದೆ. ದಕ್ಷಿಣ ಕನ್ನಡದಲ್ಲಿ  ಈ ಉಚಿತಗಳ ಬಗ್ಗೆ ಒಲವು ಕಡಿಮೆ. ಇಲ್ಲಿ ಉಚಿತಗಳ ಹೊರತಾಗಿ ಜನಪರ ಆಡಳಿತವನ್ನು ಜನರು ಬಯಸುತ್ತಾರೆ. ಇದೀಗ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಭ್ರಷ್ಟಾಚಾರ ಮುಕ್ತ ಹೆಜ್ಜಯ ಕಡೆಗೆ ಗಮನಹರಿಸಿದ್ದಾರೆ. ಈಚೆಗೆ ಗ್ರಾಮಕರಣಿಕರೋರ್ವರು ಪಡೆದ ಲಂಚದ ಹಣವನ್ನು ವಾಪಾಸ್‌ ನೀಡಿಸುವ ಮೂಲಕ ಗಮನ ಸೆಳೆದಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುತ್ವದ ಟ್ರೆಂಡ್‌ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸರ್ಕಾರಿ ವಿರೋಧಿ ಅಭಿಪ್ರಾಯಗಳು ಹೆಚ್ಚಾಗಿದ್ದವು. ಅದರಲ್ಲೂ ಉಚಿತ ಕೊಡುಗೆಗಳ ಬಗ್ಗೆ ಬಹುತೇಕ ಋಣಾತ್ಮಕ ಪ್ರತಿಕ್ರಿಯೆಗಳು ಇದ್ದವು. ಈ ಎಲ್ಲದರ ನಡುವೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಜನಪರವಾದ ಅಭಿಪ್ರಾಯವನ್ನು ರೂಪಿಸುತ್ತಿದ್ದಾರೆ. ಆಯ್ಕೆಯಾದ ಬಳಿಕ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಯನ್ನು ನೀಡಿದ್ದರು. ಈಗಾಗಲೇ ಒಂದೆರಡು ಪ್ರಕರಣದಲ್ಲಿ ಬಡವರಿಗೆ ನ್ಯಾಯ ದೊರಕಿಸಿದ್ದರು. ಇದೀಗ ಗ್ರಾಮಕರಣಿಕರೊಬ್ಬರು ಕಡತ ವಿಲೇವಾರಿಗೆ ಪಡೆದ ಲಂಚದ ಹಣದ ಸಹಿತ 5 ಸಾವಿರ ರೂಪಾಯಿ ಹೆಚ್ಚುವರಿ ಸೇರಿಸಿ ಮರಳಿಸುವಂತೆ ಸೂಚನ ನೀಡಿದ್ದಾರೆ. ಅದಕ್ಕೂ ಮೊದಲು ಶೇಂದಿ ಸರಬರಾಜು ಮಾಡುವ ವ್ಯಕ್ತಿಯಿಂದ ಇಲಾಖೆಯ ಅಧಿಕಾರಿಗಳು ಪಡೆದ ಲಂಚವನ್ನೂ ಹಿಂತಿರುಗಿಸುವಂತೆ ಮಾಡಿದ್ದರು. ಇದೀಗ ಶಾಸಕರ ಈ ನಡೆ ಮೆಚ್ಚುಗೆ ಪಡೆಯುತ್ತಿದ್ದು, ಅಧಿಕಾರಿಗಳು ಲಂಚ ಪಡೆದರೆ, ಕೇಳಿದರೆ ಶಾಸಕರಿಗೆ ಹೇಳಿದರೆ ಸರಿಯಾಗುತ್ತದೆ ಎನ್ನುವ ಭಾವನೆ ಬೆಳೆಯುತ್ತಿದೆ.

ಜಮೀನಿಗೆ ಸಂಬಂಧಪಟ್ಟ ಕಡತವನ್ನು ವಿಲೇವಾರಿ ಮಾಡುವ ವೇಳೆ ಗ್ರಾಮ ಕರಣಿಕರೊಬ್ಬರು ಲಂಚ ಪಡೆದಿದ್ದರು.  ನಾನು ಲಂಚ ಕೊಡುವುದಿಲ್ಲ ಶಾಸಕರಲ್ಲಿ ದೂರು ನೀಡುವುದಾಗಿ ವ್ಯಕ್ತಿ ಹೇಳಿದಾಗಲೂ ಗ್ರಾಮಕರಣಿಕರು ಲಂಚ ಪಡೆದಿದ್ದರು.ಲಂಚ ನೀಡಿದ ವ್ಯಕ್ತಿ ಶಾಸಕರಲ್ಲಿ ದೂರು ನೀಡಿದ್ದು 24 ಗಂಟೆಯೊಳಗೆ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಅದೇ ರೀತಿ  ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.  ಲಂಚ,ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಮತ್ತೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

11 minutes ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

2 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

14 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

15 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

22 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

23 hours ago