Advertisement
ಸುದ್ದಿಗಳು

#AshokKumarRai | ಲಂಚ ವಾಪಾಸ್‌ ಮಾಡಿಸಿದ ಪುತ್ತೂರು ಶಾಸಕರು | ಶಾಸಕರ ಜನಪರ ನಡೆಗೆ ಮೆಚ್ಚುಗೆ | ಭ್ರಷ್ಟಾಚಾರ ಮುಕ್ತ ಪುತ್ತೂರಿಗೆ ಹೆಜ್ಜೆ ? |

Share

ಸರ್ಕಾರ ಉಚಿತ ಕೊಡುಗೆಗಳ ಮೂಲಕ ರಾಜ್ಯದಲ್ಲಿ  ಗಮನ ಸೆಳೆದಿದೆ. ದಕ್ಷಿಣ ಕನ್ನಡದಲ್ಲಿ  ಈ ಉಚಿತಗಳ ಬಗ್ಗೆ ಒಲವು ಕಡಿಮೆ. ಇಲ್ಲಿ ಉಚಿತಗಳ ಹೊರತಾಗಿ ಜನಪರ ಆಡಳಿತವನ್ನು ಜನರು ಬಯಸುತ್ತಾರೆ. ಇದೀಗ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಭ್ರಷ್ಟಾಚಾರ ಮುಕ್ತ ಹೆಜ್ಜಯ ಕಡೆಗೆ ಗಮನಹರಿಸಿದ್ದಾರೆ. ಈಚೆಗೆ ಗ್ರಾಮಕರಣಿಕರೋರ್ವರು ಪಡೆದ ಲಂಚದ ಹಣವನ್ನು ವಾಪಾಸ್‌ ನೀಡಿಸುವ ಮೂಲಕ ಗಮನ ಸೆಳೆದಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುತ್ವದ ಟ್ರೆಂಡ್‌ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸರ್ಕಾರಿ ವಿರೋಧಿ ಅಭಿಪ್ರಾಯಗಳು ಹೆಚ್ಚಾಗಿದ್ದವು. ಅದರಲ್ಲೂ ಉಚಿತ ಕೊಡುಗೆಗಳ ಬಗ್ಗೆ ಬಹುತೇಕ ಋಣಾತ್ಮಕ ಪ್ರತಿಕ್ರಿಯೆಗಳು ಇದ್ದವು. ಈ ಎಲ್ಲದರ ನಡುವೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಜನಪರವಾದ ಅಭಿಪ್ರಾಯವನ್ನು ರೂಪಿಸುತ್ತಿದ್ದಾರೆ. ಆಯ್ಕೆಯಾದ ಬಳಿಕ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಯನ್ನು ನೀಡಿದ್ದರು. ಈಗಾಗಲೇ ಒಂದೆರಡು ಪ್ರಕರಣದಲ್ಲಿ ಬಡವರಿಗೆ ನ್ಯಾಯ ದೊರಕಿಸಿದ್ದರು. ಇದೀಗ ಗ್ರಾಮಕರಣಿಕರೊಬ್ಬರು ಕಡತ ವಿಲೇವಾರಿಗೆ ಪಡೆದ ಲಂಚದ ಹಣದ ಸಹಿತ 5 ಸಾವಿರ ರೂಪಾಯಿ ಹೆಚ್ಚುವರಿ ಸೇರಿಸಿ ಮರಳಿಸುವಂತೆ ಸೂಚನ ನೀಡಿದ್ದಾರೆ. ಅದಕ್ಕೂ ಮೊದಲು ಶೇಂದಿ ಸರಬರಾಜು ಮಾಡುವ ವ್ಯಕ್ತಿಯಿಂದ ಇಲಾಖೆಯ ಅಧಿಕಾರಿಗಳು ಪಡೆದ ಲಂಚವನ್ನೂ ಹಿಂತಿರುಗಿಸುವಂತೆ ಮಾಡಿದ್ದರು. ಇದೀಗ ಶಾಸಕರ ಈ ನಡೆ ಮೆಚ್ಚುಗೆ ಪಡೆಯುತ್ತಿದ್ದು, ಅಧಿಕಾರಿಗಳು ಲಂಚ ಪಡೆದರೆ, ಕೇಳಿದರೆ ಶಾಸಕರಿಗೆ ಹೇಳಿದರೆ ಸರಿಯಾಗುತ್ತದೆ ಎನ್ನುವ ಭಾವನೆ ಬೆಳೆಯುತ್ತಿದೆ.

ಜಮೀನಿಗೆ ಸಂಬಂಧಪಟ್ಟ ಕಡತವನ್ನು ವಿಲೇವಾರಿ ಮಾಡುವ ವೇಳೆ ಗ್ರಾಮ ಕರಣಿಕರೊಬ್ಬರು ಲಂಚ ಪಡೆದಿದ್ದರು.  ನಾನು ಲಂಚ ಕೊಡುವುದಿಲ್ಲ ಶಾಸಕರಲ್ಲಿ ದೂರು ನೀಡುವುದಾಗಿ ವ್ಯಕ್ತಿ ಹೇಳಿದಾಗಲೂ ಗ್ರಾಮಕರಣಿಕರು ಲಂಚ ಪಡೆದಿದ್ದರು.ಲಂಚ ನೀಡಿದ ವ್ಯಕ್ತಿ ಶಾಸಕರಲ್ಲಿ ದೂರು ನೀಡಿದ್ದು 24 ಗಂಟೆಯೊಳಗೆ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಅದೇ ರೀತಿ  ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.  ಲಂಚ,ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಮತ್ತೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

14 seconds ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

11 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

15 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

19 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

19 hours ago