Advertisement
ಸುದ್ದಿಗಳು

#AshokKumarRai | ಲಂಚ ವಾಪಾಸ್‌ ಮಾಡಿಸಿದ ಪುತ್ತೂರು ಶಾಸಕರು | ಶಾಸಕರ ಜನಪರ ನಡೆಗೆ ಮೆಚ್ಚುಗೆ | ಭ್ರಷ್ಟಾಚಾರ ಮುಕ್ತ ಪುತ್ತೂರಿಗೆ ಹೆಜ್ಜೆ ? |

Share

ಸರ್ಕಾರ ಉಚಿತ ಕೊಡುಗೆಗಳ ಮೂಲಕ ರಾಜ್ಯದಲ್ಲಿ  ಗಮನ ಸೆಳೆದಿದೆ. ದಕ್ಷಿಣ ಕನ್ನಡದಲ್ಲಿ  ಈ ಉಚಿತಗಳ ಬಗ್ಗೆ ಒಲವು ಕಡಿಮೆ. ಇಲ್ಲಿ ಉಚಿತಗಳ ಹೊರತಾಗಿ ಜನಪರ ಆಡಳಿತವನ್ನು ಜನರು ಬಯಸುತ್ತಾರೆ. ಇದೀಗ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಭ್ರಷ್ಟಾಚಾರ ಮುಕ್ತ ಹೆಜ್ಜಯ ಕಡೆಗೆ ಗಮನಹರಿಸಿದ್ದಾರೆ. ಈಚೆಗೆ ಗ್ರಾಮಕರಣಿಕರೋರ್ವರು ಪಡೆದ ಲಂಚದ ಹಣವನ್ನು ವಾಪಾಸ್‌ ನೀಡಿಸುವ ಮೂಲಕ ಗಮನ ಸೆಳೆದಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಹಿಂದುತ್ವದ ಟ್ರೆಂಡ್‌ ಇರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಸರ್ಕಾರಿ ವಿರೋಧಿ ಅಭಿಪ್ರಾಯಗಳು ಹೆಚ್ಚಾಗಿದ್ದವು. ಅದರಲ್ಲೂ ಉಚಿತ ಕೊಡುಗೆಗಳ ಬಗ್ಗೆ ಬಹುತೇಕ ಋಣಾತ್ಮಕ ಪ್ರತಿಕ್ರಿಯೆಗಳು ಇದ್ದವು. ಈ ಎಲ್ಲದರ ನಡುವೆ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ ಅವರು ಜನಪರವಾದ ಅಭಿಪ್ರಾಯವನ್ನು ರೂಪಿಸುತ್ತಿದ್ದಾರೆ. ಆಯ್ಕೆಯಾದ ಬಳಿಕ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತದ ಭರವಸೆಯನ್ನು ನೀಡಿದ್ದರು. ಈಗಾಗಲೇ ಒಂದೆರಡು ಪ್ರಕರಣದಲ್ಲಿ ಬಡವರಿಗೆ ನ್ಯಾಯ ದೊರಕಿಸಿದ್ದರು. ಇದೀಗ ಗ್ರಾಮಕರಣಿಕರೊಬ್ಬರು ಕಡತ ವಿಲೇವಾರಿಗೆ ಪಡೆದ ಲಂಚದ ಹಣದ ಸಹಿತ 5 ಸಾವಿರ ರೂಪಾಯಿ ಹೆಚ್ಚುವರಿ ಸೇರಿಸಿ ಮರಳಿಸುವಂತೆ ಸೂಚನ ನೀಡಿದ್ದಾರೆ. ಅದಕ್ಕೂ ಮೊದಲು ಶೇಂದಿ ಸರಬರಾಜು ಮಾಡುವ ವ್ಯಕ್ತಿಯಿಂದ ಇಲಾಖೆಯ ಅಧಿಕಾರಿಗಳು ಪಡೆದ ಲಂಚವನ್ನೂ ಹಿಂತಿರುಗಿಸುವಂತೆ ಮಾಡಿದ್ದರು. ಇದೀಗ ಶಾಸಕರ ಈ ನಡೆ ಮೆಚ್ಚುಗೆ ಪಡೆಯುತ್ತಿದ್ದು, ಅಧಿಕಾರಿಗಳು ಲಂಚ ಪಡೆದರೆ, ಕೇಳಿದರೆ ಶಾಸಕರಿಗೆ ಹೇಳಿದರೆ ಸರಿಯಾಗುತ್ತದೆ ಎನ್ನುವ ಭಾವನೆ ಬೆಳೆಯುತ್ತಿದೆ.

ಜಮೀನಿಗೆ ಸಂಬಂಧಪಟ್ಟ ಕಡತವನ್ನು ವಿಲೇವಾರಿ ಮಾಡುವ ವೇಳೆ ಗ್ರಾಮ ಕರಣಿಕರೊಬ್ಬರು ಲಂಚ ಪಡೆದಿದ್ದರು.  ನಾನು ಲಂಚ ಕೊಡುವುದಿಲ್ಲ ಶಾಸಕರಲ್ಲಿ ದೂರು ನೀಡುವುದಾಗಿ ವ್ಯಕ್ತಿ ಹೇಳಿದಾಗಲೂ ಗ್ರಾಮಕರಣಿಕರು ಲಂಚ ಪಡೆದಿದ್ದರು.ಲಂಚ ನೀಡಿದ ವ್ಯಕ್ತಿ ಶಾಸಕರಲ್ಲಿ ದೂರು ನೀಡಿದ್ದು 24 ಗಂಟೆಯೊಳಗೆ ಪಡೆದ ಮೊತ್ತಕ್ಕೆ 5 ಸಾವಿರ ಸೇರಿಸಿ ಮರಳಿಸಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಅದೇ ರೀತಿ  ಶೇಂದಿ ಕೊಂಡೊಯ್ಯುತ್ತಿದ್ದ ವ್ಯಕ್ತಿಯನ್ನು ತಡೆದು ಆತನ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಸೀಝ್ ಮಾಡಿದ್ದಲ್ಲದೆ ಆತನಿಂದ ಲಂಚವನ್ನು ಪಡೆದ ಅಧಿಕಾರಿಯಿಂದ ಲಂಚದ ಹಣವನ್ನು ಶಾಸಕರು ಮರಳಿ ಕೊಡಿಸಿದ್ದಾರೆ.  ಲಂಚ,ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಶಾಸಕರು ಮತ್ತೆ ಖಡಕ್‌ ವಾರ್ನಿಂಗ್‌ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

7 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

15 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

1 day ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago