ಯಾರಿಗೂ ಚಪ್ಪಲಿಯನ್ನು ಹಾಕಿ ಸಂತೋಷವನ್ನು ಪಡುವ ದುಸ್ಥಿತಿಗಳು ನಮಗೆ ಬಂದಿಲ್ಲ.ಚಪ್ಪಲಿ ಹಾಕಿರುವ ಸಂಗತಿ ಖಂಡನೀಯ. ಬ್ಯಾನರ್ ವಿಷಯದಲ್ಲಿ ಬಿಜೆಪಿಯವರು ಪ್ರತಿಭಟನೆ ಎಂಬ ನಾಟಕದ ಮೂಲಕ ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಆರೋಪಿಸಿದ್ದಾರೆ.
ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಇಂತಹ ಹೇಳಿಕೆಗಳು ಇನ್ನೂ ಬಿಜೆಪಿಯವರಿಂದ ನಡೆಯುತ್ತದೆ. ಆದರೆ ನಮಗೆ ಅನಗತ್ಯವಾಗಿ ಟೀಕಿಸುವ ಅಗತ್ಯ ಇಲ್ಲ. ಕಾಂಗ್ರೆಸ್ ಪಕ್ಷ ಬಂದರೆ ಅಶಾಂತಿ ಉಂಟಾಗುತ್ತದೆ ಎಂದು ಭಯ ಹುಟ್ಟಿಸುವ ಬಿಜೆಪಿಗರು ಅನಗತ್ಯವಾಗಿ ಬ್ಯಾನರ್ ವಿಚಾರದಲ್ಲಿ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪುತ್ತೂರು ಮಾಜಿ ಶಾಸಕರು ಇಂದು ಅಧಿಕಾರ ಬಿಟ್ಟು ಹೊರಗೆ ಬಂದಿದ್ದು, ಮಾತ್ರವಲ್ಲ ಅವರು ಹಿಂದು ಕಾರ್ಯಕರ್ತರಿಗೇ ದಿಕ್ಕಾರ ಕೂಗಿದ್ದು ಯಾಕೆ ಎಂಬ ಪ್ರಶ್ನೆಗೆ ಉತ್ತರವನ್ನು ನೀಡಬೇಕಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಹೇಳಿದರು.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…