Advertisement
ಸುದ್ದಿಗಳು

ಚುನಾವಣಾ ಕಣ | ಪುತ್ತೂರಿನಲ್ಲಿ ನಂಬರ್‌ 7 ರ ಆಟ | ಸಂಖ್ಯಾ ಶಾಸ್ತ್ರದ ಭವಿಷ್ಯ ಏನು ಹೇಳಿದೆ… ? |

Share

ಚುನಾವಣಾ ಕಣದಲ್ಲಿ  ಈ ಬಾರಿ ಪುತ್ತೂರು ಕ್ಷೇತ್ರವು ಎಲ್ಲೆಡೆಯಿಂದಲೂ ಗಮನ ಸೆಳೆದಿದೆ. ಯಾರಾಗಬಹುದು ಶಾಸಕರು ಎನ್ನುವ ಕುತೂಹಲ ಎಲ್ಲೆಡೆಯೂ ಇದೆ ಈ ನಡುವೆ ಕುಮಾರಸುಬ್ರಹ್ಮಣ್ಯ ಮುಳಿಯಾಲ ಅವರು ಕೇರಳದ ಪ್ರಸಿದ್ಧ ಜ್ಯೋತಿಷಿಯೊಬ್ಬರ ಬಳಿ ಸಂಖ್ಯಾಶಾಸ್ತ್ರದ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಅವರು ಮಾಡಿರುವ ವಿಶ್ಲೇಷಣೆ ಇಲ್ಲಿದೆ…

17 – 04- 2023 ರಂದು ಅರುಣ್‌ ಕುಮಾರ್‌ ಪುತ್ತಿಲ  ನಾಮಪತ್ರ ಸಲ್ಲಿಸಿದ ದಿನ.ಇದನ್ನು ಎಲ್ಲಾ ಕೂಡಿಸಿದರೆ  ಸಂಖ್ಯೆ1. ಬರುತ್ತದೆ. ಚುನಾವಣಾ ದಿನಾಂಕ 10 . ಇದನ್ನೂ ಕೂಡಿಸಿದರೆ ಸಂಖ್ಯೆ1 . ಸೂರ್ಯನಿಂದ ಆಳಲ್ಪಡುವ ಈ ಸಂಖ್ಯೆ ನಾಯಕತ್ವದ ಗುಣ ಸೂಚಿಸುತ್ತದೆ .ಇವರು ತುಂಬಾ ಪ್ರಖರರು ಮತ್ತು ಪ್ರಮುಖರಾಗಿರುತ್ತಾರೆ ಇದು ಪ್ರಥಮ ಎಂಬುದನ್ನು ಸೂಚಿಸುತ್ತದೆ. ಅಂದರೆ ಗೆಲುವು ಎಂದು ಅರ್ಥ ಅಥವಾ ಹೊಸ ಶಖೆಯ ಪ್ರಾರಂಭ ಎಂಬ ಅರ್ಥ .ಶ್ರೇಣಿಯಲ್ಲಿ ಮೊದಲಿಗರಾಗುತ್ತಾರೆ ಎಂಬುದಾಗಿ ಯೋಚಿಸಬಹುದು.

ದಿನಾಂಕ17 ,ಅಂದರೆ  ಸಂಖ್ಯೆ 8. ಎಂಟು  ಅಷ್ಠದಿಕ್ಪಾಲಕರು ಎಂದು ಅರ್ಥ. ಇದರಿಂದ ಅಷ್ಠ ದಿಕ್ಪಾಲಕರ ಅನುಗ್ರಹ ಇದೆ ಎಂದು ತಿಳಿಯಬಹುದು. ಪುತ್ತಿಲರ ಕ್ರಮ ಸಂಖ್ಯೆ 7 . ಸಂಖ್ಯೆ  7 ಮಾತ್ರ ಸಾರ್ವತ್ರಿಕವಾಗಿ ಎಲ್ಲರಿಗೂ ಲಕ್ಕಿ7ನಂಬರ್. ಹಾಗಾಗಿಯೇ ಈ ಸಂಖ್ಯೆಯನ್ನು ಮಂಗಳಕರ, ಶುಭಪ್ರದ ಭಾವಿಸಿ ಆ ದಿನಂದಂದು ತಮ್ಮ ಕೆಲಸಕಾರ್ಯಗಳನ್ನು ಆರಂಭಿಸುತ್ತಾರೆ. ಅಂದರೆ ಪುತ್ತಿಲ ರ ಗೆಲುವುವಿನ ಶುಭಾರಂಭದ ಸಂಖ್ಯೆ ಅವರ ಕ್ರಮ ಸಂಖ್ಯೆಯಾಗಿ ಒದಗಿ ಬಂದಿದೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ಸಂಖ್ಯೆ 7 ಚಂದ್ರನನ್ನು ಸೂಚಿಸುತ್ತದೆ. ಈ ಸಂಖ್ಯೆಯಲ್ಲಿ ಹುಟ್ಟಿದವರು  ಸ್ವತಂತ್ರವಾಗಿ ಇರಲು ಬಯಸುತ್ತಾರೆ. ಇವರದು ತುಂಬಾ ತೀಕ್ಷ್ಣವಾದ ವ್ಯಕ್ತಿತ್ವ. ತಮ್ಮಷ್ಟಕ್ಕೆ ತಾವೇ ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಇವರದು ವಿರಾಮ ಇಲ್ಲದಂತೆ ದುಡಿಯುವ ಜಾಯಮಾನ . ಪುತ್ತಿಲ ರದ್ದು ಇದೆ ವ್ಯಕ್ತಿತ್ವ. ಸಂಖ್ಯೆ7  ಸಪ್ತ ಋಷಿಗಳ ಪ್ರತೀಕ ಹಾಗಾಗಿ ನಮ್ಮ ಸನಾತನ ನಂಬಿಕೆಯ ಸಪ್ತಋಷಿಗಳ ಅನುಗ್ರಹವೂ ಪುತ್ತಿಲರಿಗೆ ಇದೆ ಎಂದಾಯಿತು. ಅಂದರೆ ಒಂದು ಕಡೆಯಿಂದ ದೇವಾದಿ ದೇವತೆಗಳ ಅನುಗ್ರಹ,  ಋಷಿಗಳ ಯೋಗಿಗಗಳ ಅನುಗ್ರಹ, ಪ್ರಕೃತಿಯ ಅನುಗ್ರಹ, ಅಸಂಖ್ಯ ಸಂಖ್ಯೆಯ ಜನರ ಅನುಗ್ರಹ ,  ಸ್ವಂತದ ಸಂಕಲ್ಪ ಶಕ್ತಿ, ಹಿಂದುತ್ವದ  ಭಾರತ ಮಾತೆಯ ಶ್ರಿರಕ್ಷೆ. ಹೀಗೇ ಎಲ್ಲಾ ಶಕ್ತಿಗಳೂ ಒಂದೇ ಕಡೆಗೆ ಕೇಂದ್ರೀಕೃತವಾಗಿರುವುದರಿಂದ ಅರುಣ್‌ ಕುಮಾರ್‌ ಅವರ ಪರವಾಗಿಯೇ ಅಲೆ ಕಂಡುಬರುತ್ತಿದೆ.

ಹೀಗೆ ಜಗತ್ತಿನ ಎಲ್ಲಾ ಅನುಗ್ರಹ ಕಾರಕ ಶಕ್ತಿಗಳು ಪುತ್ತಿಲರ ಪರವಾಗಿ ಇರುವಾಗ , ಮತ್ತು ಅವರು ನಾಮಪತ್ರ ಸಲ್ಲಿಸುವಾಗ ಕತ್ತಲೆಯ ಅಮಾವಾಸ್ಯೆಯಾಗಿರದೆ  ಭರವಸೆಯ ಬೆಳಕು ಬೆಳಗುತ್ತಿರುವಾಗ ಪ್ರತಿಸ್ಪರ್ದಿಗಳಿಗೆ ಗೆಲುವು ಮರೀಚಿಕೆಯೇ ಸರಿ. ಇಷ್ಟು ವರ್ಷಗಳಲ್ಲಿ ಏನಾಗಿದೆ ಎಂಬುದು ಲೆಕ್ಕಾಚಾರ ಅಲ್ಲ, ಈ ಸಲ  ಈ ಬಾರಿಯ ಸ್ಪರ್ಧಾ ಕಣದಲ್ಲಿ ಪುತ್ತಿಲರೋ ಪ್ರತಿಸ್ಪರ್ದಿಗಳೋ ಎಂಬ ಕಾಲಘಟ್ಟದಲ್ಲಿ  ಪ್ರಪಂಚದ ಸಕಲ ಶಕ್ತಿಗಳು ಪುತ್ತಿಲರ ಪರವಾಗಿದೆ. ಎಂಬುದರಲ್ಲಿ ಸಂಶಯವಿಲ್ಲ. ಹಾಗಾಗಿಯೇ ಈ ಬಾರಿ ಪುತ್ತೂರಿಗೆ ಪುತ್ತಿಲ ಎಂಬ ಟ್ರೆಂಡ್‌ ಕೂಡಾ ಸರಿಯಾಗುತ್ತಿದೆ.

ಬರಹ :
ಕುಮಾರ ಸುಬ್ರಹ್ಮಣ್ಯ ಮುಳಿಯಾಲ .
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

11 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

15 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

21 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

22 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago