ಹೊಸ ಸರ್ಕಾರ ಬಂದಂತೆ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ಕೆಲಸ ರದ್ದು

May 27, 2023
1:59 PM

ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ.

Advertisement
Advertisement
Advertisement

ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

Advertisement

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ಮಿರರ್‌ ಡೆಸ್ಕ್

the rural mirror news

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಬುಡಕಟ್ಟು ಜನಾಂಗದ ಸದಸ್ಯರಿಗೆ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ಅವಕಾಶ | ದ. ಕ ಜಿಲ್ಲೆಯ ನಾಲ್ಕು ಮಂದಿ ಆಯ್ಕೆ
May 29, 2023
12:05 PM
by: ಮಿರರ್‌ ಡೆಸ್ಕ್
ಇಚ್ಲಂಪಾಡಿಯಲ್ಲಿ ಮತ್ತೆ ಮತ್ತೆ ಕಾಡಾನೆ ದಾಳಿ…!
May 29, 2023
12:02 PM
by: ಮಿರರ್‌ ಡೆಸ್ಕ್
ಫೇಸ್ ಬುಕ್ ನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ನಿಂದಿಸಿ ಕಂಮೆಟ್ ಮಾಡಿದ ಯುವಕನ ಮೇಲೆ ಗೂಂಡಾಗಿರಿ
May 26, 2023
11:05 AM
by: ಮಿರರ್‌ ಡೆಸ್ಕ್
ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಿಡಿಲು ಸಹಿತ ಮಳೆ: ಐತಿಹಾಸಿಕ ಗಡಾಯಿಕಲ್ಲಿಗೆ ಬಡಿದ ಸಿಡಿಲು
May 24, 2023
2:18 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror